<p><strong>ಯಾದಗಿರಿ: </strong>ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ನಗರದ ವಿಬಿಆರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಶಿಲ್ಡ್ಲಸಿಕೆ ನೀಡಲಾಯಿತು.</p>.<p>ಖಾಸಗಿ ಆಸ್ಪತ್ರೆಯ 290 ಸಿಬ್ಬಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 176 ಮಂದಿ ಲಸಿಕೆ ಪಡೆದಿದ್ದಾರೆ. ಇದು ಜಿಲ್ಲೆಯಲ್ಲಿಯೇ ಶುಕ್ರವಾರ ನೀಡಿದ ಅತಿ ಹೆಚ್ಚಿನ ಲಸಿಕೆ ನೀಡಿಕೆಯಾಗಿದೆ.</p>.<p>ಲಸಿಕೆ ಪಡೆದು ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಮಾತನಾಡಿ, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮಗಳು ಅಥವಾ ಸಮಸ್ಯೆ ಉಂಟಾಗುವುದಿಲ್ಲ. ದೇಶದಲ್ಲಿಯೇ ಅಭಿವೃದ್ಧಿಪಡಿಸಿದ ಲಸಿಕೆ ಇದಾಗಿದ್ದು, ದೇಶದ ವೈಜ್ಞಾನಿಕ ಕ್ಷೇತ್ರ ಹಾಗೂ ವೈದ್ಯಕೀಯ ವಿಜ್ಞಾನ ತುಂಬಾ ಅಭಿವೃದ್ಧಿ ಸಾಧಿಸಿದೆ ಎಂದರು.</p>.<p>ಆದರಂತೆ ಹಳೆ ಜಿಲ್ಲಾಸ್ಪತ್ರೆಯಲ್ಲಿಯೂ 199 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 115 ಜನರಿಗೆ ಲಸಿಕೆ ನೀಡಲಾಗಿದೆ. ಎರಡು ಕಡೆಯೂ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಿತಾ ಎಸ್.ಕೆ ನೇತೃತ್ವ ವಹಿಸಿದ್ದರು.</p>.<p>ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದುಮತಿ ಪಾಟೀಲ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಆರ್ಸಿಎಚ್ಒ ಡಾ.ಸೂರ್ಯಪ್ರಕಾಶ ಕಂದಕೂರ, ಐಎಂಎ ಅಧ್ಯಕ್ಷ ಡಾ.ಸಿ.ಎಂ.ಪಾಟೀಲ, ಡಾ.ಶರಣರೆಡ್ಡಿ ಕೋಡ್ಲಾ, ಡಾ.ಸುನೀಲ್ ಮೂಕ್ಕನೋರ, ಡಾ.ಬಸವರಾಜ ನರಣಸಿಗಿ, ಡಾ.ದೇವಾನಂದ, ಡಾ.ಪ್ರಶಾಂತ ಬಾಸ್ಕುಕರ್ ಸೇರಿದಂತೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ನಗರದ ವಿಬಿಆರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಶಿಲ್ಡ್ಲಸಿಕೆ ನೀಡಲಾಯಿತು.</p>.<p>ಖಾಸಗಿ ಆಸ್ಪತ್ರೆಯ 290 ಸಿಬ್ಬಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 176 ಮಂದಿ ಲಸಿಕೆ ಪಡೆದಿದ್ದಾರೆ. ಇದು ಜಿಲ್ಲೆಯಲ್ಲಿಯೇ ಶುಕ್ರವಾರ ನೀಡಿದ ಅತಿ ಹೆಚ್ಚಿನ ಲಸಿಕೆ ನೀಡಿಕೆಯಾಗಿದೆ.</p>.<p>ಲಸಿಕೆ ಪಡೆದು ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಮಾತನಾಡಿ, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮಗಳು ಅಥವಾ ಸಮಸ್ಯೆ ಉಂಟಾಗುವುದಿಲ್ಲ. ದೇಶದಲ್ಲಿಯೇ ಅಭಿವೃದ್ಧಿಪಡಿಸಿದ ಲಸಿಕೆ ಇದಾಗಿದ್ದು, ದೇಶದ ವೈಜ್ಞಾನಿಕ ಕ್ಷೇತ್ರ ಹಾಗೂ ವೈದ್ಯಕೀಯ ವಿಜ್ಞಾನ ತುಂಬಾ ಅಭಿವೃದ್ಧಿ ಸಾಧಿಸಿದೆ ಎಂದರು.</p>.<p>ಆದರಂತೆ ಹಳೆ ಜಿಲ್ಲಾಸ್ಪತ್ರೆಯಲ್ಲಿಯೂ 199 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 115 ಜನರಿಗೆ ಲಸಿಕೆ ನೀಡಲಾಗಿದೆ. ಎರಡು ಕಡೆಯೂ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಿತಾ ಎಸ್.ಕೆ ನೇತೃತ್ವ ವಹಿಸಿದ್ದರು.</p>.<p>ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದುಮತಿ ಪಾಟೀಲ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಆರ್ಸಿಎಚ್ಒ ಡಾ.ಸೂರ್ಯಪ್ರಕಾಶ ಕಂದಕೂರ, ಐಎಂಎ ಅಧ್ಯಕ್ಷ ಡಾ.ಸಿ.ಎಂ.ಪಾಟೀಲ, ಡಾ.ಶರಣರೆಡ್ಡಿ ಕೋಡ್ಲಾ, ಡಾ.ಸುನೀಲ್ ಮೂಕ್ಕನೋರ, ಡಾ.ಬಸವರಾಜ ನರಣಸಿಗಿ, ಡಾ.ದೇವಾನಂದ, ಡಾ.ಪ್ರಶಾಂತ ಬಾಸ್ಕುಕರ್ ಸೇರಿದಂತೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>