ಸದ್ಯ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮೊಸಳೆಗಳು ಪ್ರತ್ಯಕ್ಷವಾಗುತ್ತಿವೆ. ಕೆಲ ತಿಂಗಳ ಹಿಂದೆ ಕುರಿಗಳನ್ನು ಸ್ನಾನ ಮಾಡಿಸಲು ಹೋಗಿದ್ದ ಕುರಿಗಾಹಿ ಮೇಲೆ ಮೊಸಳೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೆ ಈ ಘಟನೆ ಮರುಕಳಿಸಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.