<p><strong>ಯಾದಗಿರಿ:</strong> ರಾಜ್ಯ ಸರ್ಕಾರ ರೈತರಿಗಾಗಿ ಬಿಡುಗಡೆ ಮಾಡಿರುವ ಬೆಳೆಹಾನಿ ಪರಿಹಾರದ ಹಣವು ರಾಷ್ಟ್ರೀಯ ಹಾಗೂ ಗ್ರಾಮೀಣ ಬ್ಯಾಂಕ್ಗಳು ಸಾಲದ ಖಾತೆಗಳಿಗೆ ಹೊಂದಿಸಿಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಅವರು, ಪರಿಹಾರದ ಹಣ ಸಾಲಕ್ಕೆ ಜಮೆ ಮಾಡುಕೊಳ್ಳುವವರಿಗೆ ತಕ್ಷಣವೇ ನಿಲ್ಲಿಸುಂವತೆ ಸೂಚನೆ ನೀಡಬೇಕು. ನಿರ್ಲಕ್ಷ್ಯ ವಹಿಸಿದರೆ ರೈತರೊಂದಿಗೆ ಖುದ್ದಾಗಿ ಬ್ಯಾಂಕ್ಗಳ ಮುಂದೆ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<p>ಜಿಲ್ಲೆಯ 1.22 ಲಕ್ಷ ರೈತರಿಗೆ ಮೊದಲ ಕಂತಿನಲ್ಲಿ ₹ 124 ಕೋಟಿ ಬೆಳೆಹಾನಿ ಪರಿಹಾರದ ಹಣ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ. 2ನೇ ಕಂತಿನಲ್ಲಿ ₹ 99 ಕೋಟಿ ಬಿಡುಗಡೆಯಾಗಲಿದೆ. ಕಷ್ಟದಲ್ಲಿರುವ ರೈತರಿಗೆ ನೆರವಾಗಲು ಸರ್ಕಾರ ಪರಿಹಾರ ನೀಡಿದರೆ ಅದನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವ ಬ್ಯಾಂಕ್ಗಳ ಕಾರ್ಯವೈಖರಿ ಹೇಗಿದೆ ಎಂದರೆ; ರೈತರು ಆತ್ಮಹತ್ಯೆ ದಾರಿ ತುಳಿಯಲು ಪ್ರೇರಣೆ ನೀಡಿದಂತೆ ಎಂದಿದ್ದಾರೆ.</p>.<p>ರೈತರು ಏನಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ನೇರವಾಗಿ ಬ್ಯಾಂಕ್ನವರೆ ಹೊಣೆಯಾಗುತ್ತಾರೆ. ಕೂಡಲೇ ಜಿಲ್ಲಾಧಿಕಾರಿ ಸಂಬಂಧಪಟ್ಟ ಬ್ಯಾಂಕ್ಗಳ ವ್ಯವಸ್ಥಾಪಕರಿಗೆ ಆದೇಶ ನೀಡಿ, ಈ ಪ್ರವೃತ್ತಿ ನಿಲ್ಲಿಸಬೇಕು. ಕಷ್ಟದ ಸಮಯದಲ್ಲಿ ಸ್ವಲ್ಪ ಸಹಾಯವಾಗಲಿ ಎಂದು ಸರ್ಕಾರ ಪರಿಹಾರ ನೀಡಿದರೆ ಅದನ್ನು ಸಾಲದ ಖಾತೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವ ಬ್ಯಾಂಕ್ಗಳ ಮೇಲೆ ಸೂಕ್ತ ಕಾನೂನಿನ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ರಾಜ್ಯ ಸರ್ಕಾರ ರೈತರಿಗಾಗಿ ಬಿಡುಗಡೆ ಮಾಡಿರುವ ಬೆಳೆಹಾನಿ ಪರಿಹಾರದ ಹಣವು ರಾಷ್ಟ್ರೀಯ ಹಾಗೂ ಗ್ರಾಮೀಣ ಬ್ಯಾಂಕ್ಗಳು ಸಾಲದ ಖಾತೆಗಳಿಗೆ ಹೊಂದಿಸಿಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಅವರು, ಪರಿಹಾರದ ಹಣ ಸಾಲಕ್ಕೆ ಜಮೆ ಮಾಡುಕೊಳ್ಳುವವರಿಗೆ ತಕ್ಷಣವೇ ನಿಲ್ಲಿಸುಂವತೆ ಸೂಚನೆ ನೀಡಬೇಕು. ನಿರ್ಲಕ್ಷ್ಯ ವಹಿಸಿದರೆ ರೈತರೊಂದಿಗೆ ಖುದ್ದಾಗಿ ಬ್ಯಾಂಕ್ಗಳ ಮುಂದೆ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<p>ಜಿಲ್ಲೆಯ 1.22 ಲಕ್ಷ ರೈತರಿಗೆ ಮೊದಲ ಕಂತಿನಲ್ಲಿ ₹ 124 ಕೋಟಿ ಬೆಳೆಹಾನಿ ಪರಿಹಾರದ ಹಣ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ. 2ನೇ ಕಂತಿನಲ್ಲಿ ₹ 99 ಕೋಟಿ ಬಿಡುಗಡೆಯಾಗಲಿದೆ. ಕಷ್ಟದಲ್ಲಿರುವ ರೈತರಿಗೆ ನೆರವಾಗಲು ಸರ್ಕಾರ ಪರಿಹಾರ ನೀಡಿದರೆ ಅದನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವ ಬ್ಯಾಂಕ್ಗಳ ಕಾರ್ಯವೈಖರಿ ಹೇಗಿದೆ ಎಂದರೆ; ರೈತರು ಆತ್ಮಹತ್ಯೆ ದಾರಿ ತುಳಿಯಲು ಪ್ರೇರಣೆ ನೀಡಿದಂತೆ ಎಂದಿದ್ದಾರೆ.</p>.<p>ರೈತರು ಏನಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ನೇರವಾಗಿ ಬ್ಯಾಂಕ್ನವರೆ ಹೊಣೆಯಾಗುತ್ತಾರೆ. ಕೂಡಲೇ ಜಿಲ್ಲಾಧಿಕಾರಿ ಸಂಬಂಧಪಟ್ಟ ಬ್ಯಾಂಕ್ಗಳ ವ್ಯವಸ್ಥಾಪಕರಿಗೆ ಆದೇಶ ನೀಡಿ, ಈ ಪ್ರವೃತ್ತಿ ನಿಲ್ಲಿಸಬೇಕು. ಕಷ್ಟದ ಸಮಯದಲ್ಲಿ ಸ್ವಲ್ಪ ಸಹಾಯವಾಗಲಿ ಎಂದು ಸರ್ಕಾರ ಪರಿಹಾರ ನೀಡಿದರೆ ಅದನ್ನು ಸಾಲದ ಖಾತೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವ ಬ್ಯಾಂಕ್ಗಳ ಮೇಲೆ ಸೂಕ್ತ ಕಾನೂನಿನ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>