ಯಾದಗಿರಿ: ಕಳೆದ ವರ್ಷ ಕೃಷ್ಣಾ ನದಿ ಪ್ರವಾಹದಿಂದ ಶಹಾಪುರ ಹಾಗೂ ವಡಗೇರಾ ತಾಲ್ಲೂಕಿನ ನದಿ ತೀರದ ಗ್ರಾಮಗಳ ರೈತರ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ಆದರೆ, ಇಲ್ಲಿಯವರೆಗೆ ಇನ್ನೂಪರಿಹಾರದ ಹಣ ನೀಡಿಲ್ಲ. ಮತ್ತೆ ಪ್ರವಾಹ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಕೊಳ್ಳೂರ, ಯಕ್ಷಂತಿ, ಮದರಕಲ್, ಟೊಣ್ಣೂರು, ಐಕೂರ, ಅನಕಸೂಗುರ ಸೇರಿದಂತೆ ಹಲವಾರು ಗ್ರಾಮಗಳ ರೈತರು ಜಿಲ್ಲಾ ಉಸ್ತುವಾರಿ ಸಚಿವರ ಮುಂದೆ ತಮ್ಮ ನೋವು ತೋಡಿಕೊಂಡರು.