ವಿಜಯಪುರ: ‘ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಬಚ್ಚಾ’ ಎಂದು ಕರೆದಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸ್ವಭಾವವನ್ನು ಬಹಿರಂಗವಾಗಿ ತೋರ್ಪಡಿಸಿದ್ದಾರೆ ಎಂದು ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು. ಇಲ್ಲಿ ಶುಕ್ರವಾರ ಮಾತನಾಡಿದರ ಅವರು, ಯಡಿಯೂರಪ್ಪ ಅವರು ನೀಡಿರುವ ಕೀಳುಮಟ್ಟದ ಹೇಳಿಕೆ ಅವರಿಗೆ ಶೋಭೆ ತರುವಂತಹದಲ್ಲ ಎಂದರು.