<p><strong>ಯಾದಗಿರಿ</strong>: ಆಯುರ್ವೇದ ಚಿಕಿತ್ಸೆಯಿಂದ ಮನುಷ್ಯನ ಎಲ್ಲಾ ರೋಗಗಳನ್ನು ನಿಯಂತ್ರಿಸಿ ವಾಸಿ ಮಾಡಬಹುದು. ಕೋವಿಡ್ ಸಂದರ್ಭದಲ್ಲಿ ಜನರು ಈ ಚಿಕಿತ್ಸೆ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ರೋಗದಿಂದ ಮುಕ್ತರಾಗಿದ್ದಾರೆ ಎಂದು ಡಾ. ಮಂಜುನಾಥ ಸಾಸನೂರ ಹೇಳಿದರು.</p>.<p>ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿವಸ ಅಂಗವಾಗಿ ಧನ್ವಂತರಿ ಜಯಂತಿಯಲ್ಲಿ ಧನ್ವಂತರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಪ್ರಾಚೀನ ಕಾಲದಿಂದಲೂ ಋಷಿ ಮುನಿಗಳು, ನಿಸರ್ಗದಲ್ಲಿರುವ ಔಷಧಿ ಸಸ್ಯಗಳನ್ನು ಕಂಡುಹಿಡಿದು ಔಷಧಿ ತಯಾರಿಸಿ ಜನರ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈಗಲೂ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಇದು ಸಹಕಾರಿಯಾಗಿದೆ ಎಂದು ಆಯುರ್ವೇದ ಮಹತ್ವ ವಿವರಿಸಿದರು.</p>.<p>ಈ ಸಂದರ್ಭದಲ್ಲಿ ಡಾ. ಶಿವಲಿಂಗಪ್ಪ ಪಾಟೀಲ, ನಾಗರಾಜ್ ಕೆಂಭಾವಿ, ಶಿಲ್ಪಾ ರಾಣಿ, ಸಂಗಮೇಶ, ಸುಧಾರಾಣಿ, ರಹೇಮಾನ್ ಸೇರಿದಂತೆ ಸಿಬ್ಬಂದಿವರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಆಯುರ್ವೇದ ಚಿಕಿತ್ಸೆಯಿಂದ ಮನುಷ್ಯನ ಎಲ್ಲಾ ರೋಗಗಳನ್ನು ನಿಯಂತ್ರಿಸಿ ವಾಸಿ ಮಾಡಬಹುದು. ಕೋವಿಡ್ ಸಂದರ್ಭದಲ್ಲಿ ಜನರು ಈ ಚಿಕಿತ್ಸೆ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ರೋಗದಿಂದ ಮುಕ್ತರಾಗಿದ್ದಾರೆ ಎಂದು ಡಾ. ಮಂಜುನಾಥ ಸಾಸನೂರ ಹೇಳಿದರು.</p>.<p>ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿವಸ ಅಂಗವಾಗಿ ಧನ್ವಂತರಿ ಜಯಂತಿಯಲ್ಲಿ ಧನ್ವಂತರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>ಪ್ರಾಚೀನ ಕಾಲದಿಂದಲೂ ಋಷಿ ಮುನಿಗಳು, ನಿಸರ್ಗದಲ್ಲಿರುವ ಔಷಧಿ ಸಸ್ಯಗಳನ್ನು ಕಂಡುಹಿಡಿದು ಔಷಧಿ ತಯಾರಿಸಿ ಜನರ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈಗಲೂ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಇದು ಸಹಕಾರಿಯಾಗಿದೆ ಎಂದು ಆಯುರ್ವೇದ ಮಹತ್ವ ವಿವರಿಸಿದರು.</p>.<p>ಈ ಸಂದರ್ಭದಲ್ಲಿ ಡಾ. ಶಿವಲಿಂಗಪ್ಪ ಪಾಟೀಲ, ನಾಗರಾಜ್ ಕೆಂಭಾವಿ, ಶಿಲ್ಪಾ ರಾಣಿ, ಸಂಗಮೇಶ, ಸುಧಾರಾಣಿ, ರಹೇಮಾನ್ ಸೇರಿದಂತೆ ಸಿಬ್ಬಂದಿವರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>