<p><strong>ಯಾದಗಿರಿ:</strong> ಇಲ್ಲಿನ ದುರ್ಗಾನಗರದಲ್ಲಿ ಶನಿವಾರ ಸಿಲಿಂಡರ್ ಸ್ಫೋಟದಿಂದ ಶೆಡ್ವೊಂದು ಬೆಂಕಿಗೆ ಆಹುತಿಯಾಗಿದ್ದು, ನಗದು, ಚಿನ್ನಾಭರಣ ಸುಟ್ಟು ಕರಕಲಾಗಿವೆ.</p>.<p>ಮಲ್ಲಯ್ಯ–ಅಕ್ಕಮ್ಮ ಅವರಿಗೆ ಸೇರಿದ ಶೆಡ್ ಬೆಂಕಿಗೆ ಆಹುತಿಯಾಗಿದೆ. ಕುಟುಂಬವು ಕಂಗಾಲಾಗಿದೆ.</p>.<p>ಹೊಸ ಮನೆ ನಿರ್ಮಾಣಕ್ಕಾಗಿ ಪಕ್ಕದಲ್ಲಿ ಮಲ್ಲಯ್ಯ ಅವರು ಶೆಡ್ ನಿರ್ಮಿಸಿಕೊಂಡಿದ್ದರು. ಹೊಸ ಮನೆಯ ಗೃಹ ಪ್ರವೇಶಕ್ಕೆ ತಯಾರಿ ನಡೆಸಿದ್ದರು. ಶನಿವಾರ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ₹7 ಲಕ್ಷ ನಗದು, 100 ಗ್ರಾಂ ಚಿನ್ನ,150 ಗ್ರಾಂ ಬೆಳ್ಳಿಯ ಆಭರಣಗಳು, ಆಹಾರ ಧಾನ್ಯ ಸೇರಿ ಬೆಲೆ ಬಾಳುವ ವಸ್ತುಗಳು ಹಾನಿಯಾಗಿವೆ. </p>.<p>ಸ್ಥಳಕ್ಕೆ ಕಂದಾಯ ಅಧಿಕಾರಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ‘ಮನೆ ಹಾನಿಯಿಂದ ದಂಪತಿ ಕಣ್ಣೀರು ಹಾಕುವಂತಾಗಿದೆ. ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ನಿವಾಸಿಗಳು ಒತ್ತಾಯ ಮಾಡಿದ್ದಾರೆ.</p>.<p>ಈ ವೇಳೆ ಕಂದಾಯ ಅಧಿಕಾರಿ ನಿಂಗಣ್ಣ ಜಾಲಗಾರ, ಬಸವರಾಜ ಸೇರಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಇಲ್ಲಿನ ದುರ್ಗಾನಗರದಲ್ಲಿ ಶನಿವಾರ ಸಿಲಿಂಡರ್ ಸ್ಫೋಟದಿಂದ ಶೆಡ್ವೊಂದು ಬೆಂಕಿಗೆ ಆಹುತಿಯಾಗಿದ್ದು, ನಗದು, ಚಿನ್ನಾಭರಣ ಸುಟ್ಟು ಕರಕಲಾಗಿವೆ.</p>.<p>ಮಲ್ಲಯ್ಯ–ಅಕ್ಕಮ್ಮ ಅವರಿಗೆ ಸೇರಿದ ಶೆಡ್ ಬೆಂಕಿಗೆ ಆಹುತಿಯಾಗಿದೆ. ಕುಟುಂಬವು ಕಂಗಾಲಾಗಿದೆ.</p>.<p>ಹೊಸ ಮನೆ ನಿರ್ಮಾಣಕ್ಕಾಗಿ ಪಕ್ಕದಲ್ಲಿ ಮಲ್ಲಯ್ಯ ಅವರು ಶೆಡ್ ನಿರ್ಮಿಸಿಕೊಂಡಿದ್ದರು. ಹೊಸ ಮನೆಯ ಗೃಹ ಪ್ರವೇಶಕ್ಕೆ ತಯಾರಿ ನಡೆಸಿದ್ದರು. ಶನಿವಾರ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ₹7 ಲಕ್ಷ ನಗದು, 100 ಗ್ರಾಂ ಚಿನ್ನ,150 ಗ್ರಾಂ ಬೆಳ್ಳಿಯ ಆಭರಣಗಳು, ಆಹಾರ ಧಾನ್ಯ ಸೇರಿ ಬೆಲೆ ಬಾಳುವ ವಸ್ತುಗಳು ಹಾನಿಯಾಗಿವೆ. </p>.<p>ಸ್ಥಳಕ್ಕೆ ಕಂದಾಯ ಅಧಿಕಾರಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ‘ಮನೆ ಹಾನಿಯಿಂದ ದಂಪತಿ ಕಣ್ಣೀರು ಹಾಕುವಂತಾಗಿದೆ. ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ನಿವಾಸಿಗಳು ಒತ್ತಾಯ ಮಾಡಿದ್ದಾರೆ.</p>.<p>ಈ ವೇಳೆ ಕಂದಾಯ ಅಧಿಕಾರಿ ನಿಂಗಣ್ಣ ಜಾಲಗಾರ, ಬಸವರಾಜ ಸೇರಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>