ಕೇವಲ ಎಂಟನೇ ಕ್ಲಾಸ್ ಓದಿರುವ ಜಿ.ಟಿ. ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಖಾತೆ ಕೊಟ್ಟಿದ್ದಾರೆ. ಅಂತಹವರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಏನು ತಾನೇ ಮಾತನಾಡುತ್ತಾರೆ. ಅವರ ಬದಲು ಶಿಕ್ಷಣ ಕ್ಷೇತ್ರದ ಬಗ್ಗೆ ಜ್ಞಾನ ಇರುವ ಹೊರಟ್ಟಿ ಅವರನ್ನು ಸಚಿವರನ್ನಾಗಿ ಮಾಡಿದ್ದರೆ, ಆ ಸ್ಥಾನಕ್ಕೆ ಘನತೆ ತಂದು ಕೊಡುತ್ತಿದ್ದರು ಎಂದು ಹೇಳಿದರು.