ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರಕಿಹೊಳಿಗೆ ಸಚಿವ ಸ್ಥಾನ: ಆಗ್ರಹ

ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ
Last Updated 12 ಜೂನ್ 2018, 10:07 IST
ಅಕ್ಷರ ಗಾತ್ರ

ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವೇದಿಕೆಯ ಕಾರ್ಯಕರ್ತರು ಹಿರಿಯ ರಾಜಕಾರಣಿ ಹಾಗೂ ಶೋಷಿತ ವರ್ಗಗಳ ನಾಯಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾ ಸಂಯೋಜಕ ಶ್ರೀಶೈಲ್ ಅಂಟಿನ, ‘ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉದ್ದೇಶಪೂರ್ವಕವಾಗಿ ಜಾರಕಿಹೊಳಿ ಅವರನ್ನು ಸಂಪುಟದಿಂದ ಹೊರಗಿಡಲಾಗಿದೆ. ಈ ರೀತಿಯ ಅನ್ಯಾಯವನ್ನು ಸರಿಪಡಿಸದಿದ್ದಲ್ಲಿ ಮುಂದಿನ ದಿನಮಾನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೂ ತಕ್ಕ ಪರಿಣಾಮ ಎದುರಿಸಲಿದೆ’ ಎಂದು ಎಚ್ಚರಿಸಿದರು.

‘ಜಾರಕಿಹೊಳಿ ಅವರು ರಾಜ್ಯದ ಪ್ರತಿಯೊಂದು ತಾಲ್ಲೂಕುಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ತೊರೆದರೆ ರಾಜ್ಯ ಮತ್ತೊಂದು ಉತ್ತರ ಪ್ರದೇಶವಾಗಲಿದೆ. ದಲಿತರು ಹಾಗೂ ಅಲ್ಪಸಂಖ್ಯಾತರು ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ತೊರೆದಿರುವುದರಿಂದ ಅಲ್ಲಿ ಪಕ್ಷ ತಲೆ ಎತ್ತಲು ಕೂಡ ಒದ್ದಾಡುತ್ತಿದೆ. ರಾಜ್ಯದಲ್ಲಿ ಆ ರೀತಿ ಆಗಬಾರದೆಂದರೆ, ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.

‘ಈ ಸಮ್ಮಿಶ್ರ ಸರ್ಕಾರ ಸಾಮಾಜಿಕ ಹಾಗೂ ಭೌಗೋಳಿಕವಾಗಿ ಅಸಮತೋಲನವಾಗಿದೆ. ಸಚಿವ ಸ್ಥಾನ ನೀಡುವಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಜೊತೆಗೆ 14 ಜಿಲ್ಲೆಗಳ ಹಾಗೂ ಹಲವಾರು ಸಮುದಾಯಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಸಮರ್ಥರನ್ನು ಉದ್ದೇಶಪೂರ್ವಕವಾಗಿ ಸಂಪುಟದಿಂದ ಹೊರಗಿಡಲಾಗಿದೆ’ ಎಂದು ಹೇಳಿದರು.

ಮುಖಂಡ ಬಸವರಾಜ ಹೂವಿನಹಳ್ಳಿ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಪಡೆಯಲು ಶ್ರಮಿಸಿದ್ದಾರೆ. ಶಾಸಕ ಹಾಗೂ ಸಚಿವರಾಗಿ ಅನೇಕ ಯೋಜನೆಗಳನ್ನು ತಂದು ಶೋಷಿತ ವರ್ಗಗಳ ಜನರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.

ಮುಖಂಡರಾದ ಮಹೇಶ ಹುದ್ದಿ, ಸತೀಶ ನಾಯ್ಕರ್, ಲಕ್ಷಣ ಮಾಲಗಿ, ಸುಭಾಸ್ ಗಸ್ತಿ, ಜಯರಾಜ ಹಾದಿಮನಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT