<p><strong>ಸುರಪುರ:</strong> ‘ಕೆವೈಡಿಸಿಸಿ ಬ್ಯಾಂಕ್ ಬಲವರ್ಧನೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು. ರೈತರ ಮತ್ತು ಗ್ರಾಹಕರ ಅನುಕೂಲಕ್ಕಾಗಿ ಹುಣಸಗಿ ಮತ್ತು ಕೆಂಭಾವಿ ಪಟ್ಟಣದಲ್ಲಿ ಡಿಸಿಸಿ ಬ್ಯಾಂಕ್ ಶಾಖೆಗಳನ್ನು ಸ್ಥಾಪಿಸಲಾಗುವುದು’ ಎಂದು ಕೆವೈಡಿಸಿಸಿ ಬ್ಯಾಂಕ್ನ ಅಧ್ಯಕ್ಷ ವಿಠ್ಠಲ ಯಾದವ ಹೇಳಿದರು.</p>.<p>ನಗರದಲ್ಲಿ ಶನಿವಾರ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಸಂಘದವರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಹಿಂದಿನ ಆಡಳಿತ ಮಂಡಳಿಯವರು ಬ್ಯಾಂಕ್ನ ಸ್ಥಿತಿಯನ್ನು ಉತ್ತಮ ಹಂತದಲ್ಲಿ ತಂದಿದ್ದಾರೆ. ಕಲಬುರಗಿ-ಯಾದಗಿರಿ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ನಾನು ಮತ್ತು ನಮ್ಮ ನಿರ್ದೇಶಕರು ಪಕ್ಷಾತೀತವಾಗಿ ಕೆಲಸ ಮಾಡಲು ಪ್ರಾಮಾಣಿಕವಾಗಿ ಪಯತ್ನ ಮಾಡುತ್ತೇವೆ’ ಎಂದರು.</p>.<p>‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳೇ ಸಂಘದ ಆಧಾರ ಸ್ತಂಭಗಳು. ಅವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಗುತ್ತಿಗೆದಾರ ಸಂಘದಿಂದ ಪಿಕೆಪಿಸಿಎಸ್ನಲ್ಲಿ ಚಾಲ್ತಿ ಖಾತೆ ತೆಗೆದು ಠೇವಣಿ ಇಡಲು ವಿನಂತಿಸಲಾಗುವುದು’ ಎಂದರು.</p>.<p>ನಿರ್ದೇಶಕ ಸುರೇಶ್ ಸಜ್ಜನ್ ಮಾತನಾಡಿ, ‘ಸೊಸೈಟಿಗಳ ಕಾರ್ಯದರ್ಶಿಗಳು ಹಲವಾರು ಸಮಸ್ಯೆಗಳ ಮಧ್ಯೆ ಇಂದು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸೇವೆ ಅನನ್ಯ. ಅವರನ್ನು ಕಾಯಂ ಗೊಳಿಸಲು ಈ ಹಿಂದೆ ಪ್ರಯತ್ನಿಸಲಾಗಿತ್ತು. ಅವರ ಹುದ್ದೆ ಕಾಯಂ ಗೊಳಿಸುವುದರಿಂದ ಸರ್ಕಾರಕ್ಕೆ ಹೊರೆಯಾಗುವುದಿಲ್ಲ’ ಎಂದರು.</p>.<p>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ದೋರನಹಳ್ಳಿ ರುಕ್ಮಾಪುರ ಮಾತನಾಡಿದರು.</p>.<p>ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.</p>.<p>ನಿರ್ದೇಶಕ ಬಸನಗೌಡ ಪಾಟೀಲ ಚಿಂಚೋಳಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಪ್ರಕಾಶ ಸಜ್ಜನ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಶಿವಲಿಂಗಪ್ಪ ವೆಂಕಟಗಿರಿ, ಟಿಎಪಿಸಿಎಂಎಸ್ ನಿರ್ದೇಶಕ ಬಸನಗೌಡ ಹೊಸಮನಿ ವೇದಿಕೆಯಲ್ಲಿದ್ದರು.</p>.<p>ತಾಲ್ಲೂಕಿನ ಎಲ್ಲಾ ಸಹಕಾರ ಸಂಘದ ಕಾರ್ಯದರ್ಶಿಗಳು, ಸಿಬ್ಬಂದಿಗಳು ಇದ್ದರು. ಸಿಇಒಗಳಾದ ರಾಜಶೇಖರ ಯಾಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ ದೇಸಾಯಿ ಸೂಗೂರು ಸ್ವಾಗತಿಸಿದರು. ವಸಂತ ಕುಲಕರ್ಣಿ ಕಾಮನಟಗಿ ನಿರೂಪಿಸಿದರು. ಮಲ್ಲು ಬಾದ್ಯಾಪುರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಕೆವೈಡಿಸಿಸಿ ಬ್ಯಾಂಕ್ ಬಲವರ್ಧನೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು. ರೈತರ ಮತ್ತು ಗ್ರಾಹಕರ ಅನುಕೂಲಕ್ಕಾಗಿ ಹುಣಸಗಿ ಮತ್ತು ಕೆಂಭಾವಿ ಪಟ್ಟಣದಲ್ಲಿ ಡಿಸಿಸಿ ಬ್ಯಾಂಕ್ ಶಾಖೆಗಳನ್ನು ಸ್ಥಾಪಿಸಲಾಗುವುದು’ ಎಂದು ಕೆವೈಡಿಸಿಸಿ ಬ್ಯಾಂಕ್ನ ಅಧ್ಯಕ್ಷ ವಿಠ್ಠಲ ಯಾದವ ಹೇಳಿದರು.</p>.<p>ನಗರದಲ್ಲಿ ಶನಿವಾರ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಸಂಘದವರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಹಿಂದಿನ ಆಡಳಿತ ಮಂಡಳಿಯವರು ಬ್ಯಾಂಕ್ನ ಸ್ಥಿತಿಯನ್ನು ಉತ್ತಮ ಹಂತದಲ್ಲಿ ತಂದಿದ್ದಾರೆ. ಕಲಬುರಗಿ-ಯಾದಗಿರಿ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ನಾನು ಮತ್ತು ನಮ್ಮ ನಿರ್ದೇಶಕರು ಪಕ್ಷಾತೀತವಾಗಿ ಕೆಲಸ ಮಾಡಲು ಪ್ರಾಮಾಣಿಕವಾಗಿ ಪಯತ್ನ ಮಾಡುತ್ತೇವೆ’ ಎಂದರು.</p>.<p>‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳೇ ಸಂಘದ ಆಧಾರ ಸ್ತಂಭಗಳು. ಅವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಗುತ್ತಿಗೆದಾರ ಸಂಘದಿಂದ ಪಿಕೆಪಿಸಿಎಸ್ನಲ್ಲಿ ಚಾಲ್ತಿ ಖಾತೆ ತೆಗೆದು ಠೇವಣಿ ಇಡಲು ವಿನಂತಿಸಲಾಗುವುದು’ ಎಂದರು.</p>.<p>ನಿರ್ದೇಶಕ ಸುರೇಶ್ ಸಜ್ಜನ್ ಮಾತನಾಡಿ, ‘ಸೊಸೈಟಿಗಳ ಕಾರ್ಯದರ್ಶಿಗಳು ಹಲವಾರು ಸಮಸ್ಯೆಗಳ ಮಧ್ಯೆ ಇಂದು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸೇವೆ ಅನನ್ಯ. ಅವರನ್ನು ಕಾಯಂ ಗೊಳಿಸಲು ಈ ಹಿಂದೆ ಪ್ರಯತ್ನಿಸಲಾಗಿತ್ತು. ಅವರ ಹುದ್ದೆ ಕಾಯಂ ಗೊಳಿಸುವುದರಿಂದ ಸರ್ಕಾರಕ್ಕೆ ಹೊರೆಯಾಗುವುದಿಲ್ಲ’ ಎಂದರು.</p>.<p>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ದೋರನಹಳ್ಳಿ ರುಕ್ಮಾಪುರ ಮಾತನಾಡಿದರು.</p>.<p>ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.</p>.<p>ನಿರ್ದೇಶಕ ಬಸನಗೌಡ ಪಾಟೀಲ ಚಿಂಚೋಳಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಪ್ರಕಾಶ ಸಜ್ಜನ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಶಿವಲಿಂಗಪ್ಪ ವೆಂಕಟಗಿರಿ, ಟಿಎಪಿಸಿಎಂಎಸ್ ನಿರ್ದೇಶಕ ಬಸನಗೌಡ ಹೊಸಮನಿ ವೇದಿಕೆಯಲ್ಲಿದ್ದರು.</p>.<p>ತಾಲ್ಲೂಕಿನ ಎಲ್ಲಾ ಸಹಕಾರ ಸಂಘದ ಕಾರ್ಯದರ್ಶಿಗಳು, ಸಿಬ್ಬಂದಿಗಳು ಇದ್ದರು. ಸಿಇಒಗಳಾದ ರಾಜಶೇಖರ ಯಾಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ ದೇಸಾಯಿ ಸೂಗೂರು ಸ್ವಾಗತಿಸಿದರು. ವಸಂತ ಕುಲಕರ್ಣಿ ಕಾಮನಟಗಿ ನಿರೂಪಿಸಿದರು. ಮಲ್ಲು ಬಾದ್ಯಾಪುರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>