ಯಾದಗಿರಿ: ಜಿಲ್ಲೆಯಲ್ಲಿ ಮೃತಪಡುವ ಗರ್ಭಿಣಿಯ ದೇಹವನ್ನು ಇನ್ನೂ ಮುಂದೆ ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆ ನಡೆಸಿ, ಮರಣಕ್ಕಿಡಾಗುವ ನಿಖರ ಕಾರಣಗಳನ್ನು ಪತ್ತೆ ಹಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ಎಲ್ಲಾ ತಾಲ್ಲೂಕು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.