‘ಪುಂಡ-ಪೋಕರಿಗಳ ಹಾವಳಿಗೆ ಬೇಕು ಕಡಿವಾಣ’
ಪಟ್ಟಣದ ಹೊರಹೊಲಯದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುತ್ತಲೂ ಆವರಣಗೋಡೆ ಇಲ್ಲ. ತರಗತಿಗಳು ಮುಗಿದ ನಂತರ ಇದು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುತ್ತದೆ. ಕಾಲೇಜು ಅವಧಿಯಲ್ಲಿಯೂ ಪುಂಡ ಪೋಕರಿಗಳ ಹಾವಳಿ ಹೆಚ್ಚುತ್ತದೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಹಲವು ಬಾರಿ ಮೌಖಿಕವಾಗಿ ತಿಳಿಸಿದ್ದರೂ ಹಾವಳಿಗೆ ಕಡಿವಾಣ ಹಾಕಿಲ್ಲ. ಇನ್ನಾದರೂ ಸಂಪೂರ್ಣ ಆವರಣಗೋಡೆ ನಿರ್ಮಾಣ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.