<p><strong>ಕೆಂಭಾವಿ:</strong> ‘ಭೋಗೇಶ್ವರ, ಶರಣಬಸವೇಶ್ವರ, ಸ್ವಾಧಿ ಮಲ್ಲಮ್ಮ, ಮುದನೂರಿನ ದೇವರ ದಾಸಿಮಯ್ಯನತಂಹ ಹಲವಾರು ನಾಡು ಕೆಂಭಾವಿ. ಇದು ಸಹ ಮತ್ತೊಂದು ಕಲ್ಯಾಣವಿದ್ದಂತೆ’ ಎಂದು ಶಿವಶಂಕರ ಶಾಸ್ತ್ರಿ ಆಲಗೂರು ಅಭಿಪ್ರಾಯಪಟ್ಟರು.</p>.<p>ಪಟ್ಟಣದ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಬುಧವಾರ ಕಾರ್ತಿಕ ಮಾಸದ ಅಂಗವಾಗಿ 11 ದಿನಗಳಿಂದ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಪ್ರವಚನ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹಲವು ಊರುಗಳಲ್ಲಿ ರೇವಣಸಿದ್ದೇಶ್ವರ ದೇವಸ್ಥಾನವಿದೆ. ಅದರಲ್ಲಿಯೂ ಇಲ್ಲಿಯ ಕೆಂಭಾವಿಯ ದೇವಸ್ಥಾನದಲ್ಲಿ ಪಂಚಲಿಂಗ ಸ್ಥಾಪನೆಯಾಗಿದೆ ಎಂದು ಅವರು ಹೇಳಿದರು.</p>.<p>ಲಿಂಗನಗೌಡ ಮಾಲಿಪಾಟೀಲ ಮಾತನಾಡಿ, 11 ದಿನಗಳ ಕಾಲ ಪ್ರವಚನ ಕಾರ್ಯಕ್ರಮ ಆಯೋಜನೆ ಮಾಡಿ, ಯಶಸ್ವಿಗೊಳಿಸಿರುವರುವ ಯುವಕರ ಕಾರ್ಯ ಶ್ಲಾಘನೀಯ. ಈ ಕೆಲಸಗಳು ನಿರಂತರವಾಗಿ ನಡೆಯಲಿ ಎಂದು ತಿಳಿಸಿದರು.</p>.<p>ಸಾನಿಧ್ಯ ವಹಿಸಿದ್ದಹಿರೇಮಠ ಸಂಸ್ಥಾನದ ಚನ್ನಬಸವ ಶಿವಾಚಾರ್ಯರು ಮಾತನಾಡಿದರು. ನಾಗರಾಜ ಶಾಸ್ತ್ರಿ ಹೂಗಾರ ಪ್ರಾಸ್ತಾವಿಕ ಮಾತನಾಡಿದರು.</p>.<p>ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ಬಾಜಾ ಭಜಂತ್ರಿ ಮೂಲಕ ಕುಂಬ ಮತ್ತು ಭಾವಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು.</p>.<p>ಬಸವರಾಜ ಭಂಟನೂರ, ಯಮನೇಶ ಯಾಳಗಿ, ಮಲ್ಲಯ ಸ್ವಾಮಿ ವಡಗೇರಿ ಸಂಗೀತ ಸೇವೆ ಸಲ್ಲಿಸಿದರು. ಅಂಬಾ ಮಠದ ಸ್ವಾಮಿ, ಮಾಲಹಳ್ಳಿ ಯ ಆರ್ಚಕರು, ಪ್ರವಚನಕಾರರಾದ ಆದಪ್ಪ ಆವಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ‘ಭೋಗೇಶ್ವರ, ಶರಣಬಸವೇಶ್ವರ, ಸ್ವಾಧಿ ಮಲ್ಲಮ್ಮ, ಮುದನೂರಿನ ದೇವರ ದಾಸಿಮಯ್ಯನತಂಹ ಹಲವಾರು ನಾಡು ಕೆಂಭಾವಿ. ಇದು ಸಹ ಮತ್ತೊಂದು ಕಲ್ಯಾಣವಿದ್ದಂತೆ’ ಎಂದು ಶಿವಶಂಕರ ಶಾಸ್ತ್ರಿ ಆಲಗೂರು ಅಭಿಪ್ರಾಯಪಟ್ಟರು.</p>.<p>ಪಟ್ಟಣದ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಬುಧವಾರ ಕಾರ್ತಿಕ ಮಾಸದ ಅಂಗವಾಗಿ 11 ದಿನಗಳಿಂದ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಪ್ರವಚನ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಹಲವು ಊರುಗಳಲ್ಲಿ ರೇವಣಸಿದ್ದೇಶ್ವರ ದೇವಸ್ಥಾನವಿದೆ. ಅದರಲ್ಲಿಯೂ ಇಲ್ಲಿಯ ಕೆಂಭಾವಿಯ ದೇವಸ್ಥಾನದಲ್ಲಿ ಪಂಚಲಿಂಗ ಸ್ಥಾಪನೆಯಾಗಿದೆ ಎಂದು ಅವರು ಹೇಳಿದರು.</p>.<p>ಲಿಂಗನಗೌಡ ಮಾಲಿಪಾಟೀಲ ಮಾತನಾಡಿ, 11 ದಿನಗಳ ಕಾಲ ಪ್ರವಚನ ಕಾರ್ಯಕ್ರಮ ಆಯೋಜನೆ ಮಾಡಿ, ಯಶಸ್ವಿಗೊಳಿಸಿರುವರುವ ಯುವಕರ ಕಾರ್ಯ ಶ್ಲಾಘನೀಯ. ಈ ಕೆಲಸಗಳು ನಿರಂತರವಾಗಿ ನಡೆಯಲಿ ಎಂದು ತಿಳಿಸಿದರು.</p>.<p>ಸಾನಿಧ್ಯ ವಹಿಸಿದ್ದಹಿರೇಮಠ ಸಂಸ್ಥಾನದ ಚನ್ನಬಸವ ಶಿವಾಚಾರ್ಯರು ಮಾತನಾಡಿದರು. ನಾಗರಾಜ ಶಾಸ್ತ್ರಿ ಹೂಗಾರ ಪ್ರಾಸ್ತಾವಿಕ ಮಾತನಾಡಿದರು.</p>.<p>ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ಬಾಜಾ ಭಜಂತ್ರಿ ಮೂಲಕ ಕುಂಬ ಮತ್ತು ಭಾವಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು.</p>.<p>ಬಸವರಾಜ ಭಂಟನೂರ, ಯಮನೇಶ ಯಾಳಗಿ, ಮಲ್ಲಯ ಸ್ವಾಮಿ ವಡಗೇರಿ ಸಂಗೀತ ಸೇವೆ ಸಲ್ಲಿಸಿದರು. ಅಂಬಾ ಮಠದ ಸ್ವಾಮಿ, ಮಾಲಹಳ್ಳಿ ಯ ಆರ್ಚಕರು, ಪ್ರವಚನಕಾರರಾದ ಆದಪ್ಪ ಆವಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>