ಗುರುಮಠಕಲ್ ತಾಲ್ಲೂಕಿನ ಯಲಸತ್ತಿಯ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಗ್ರಾಮದ ಆರೀಫ್ ಖಾನ್ ಅವರಿಗೆ ಸೇರಿದ್ದ ಮನೆಯಲ್ಲಿ ಮಾಂಸ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಉಪ ವಲಯಧಿಕಾರಿ ಚಂದ್ರಶಾ ನೇತೃತ್ವದಲ್ಲಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬಿಸಿದ್ದಾರೆ.