<p><strong>ಯಾದಗಿರಿ</strong>: ‘ಗಿರಿಜನ ಸಮುದಾಯಗಳ ಸಾಂಸ್ಕೃತಿಕ ವೈಭವ, ಪರಂಪರೆ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರಲು ದೆಹಲಿಯಲ್ಲಿ ಮೇ 24ರಂದು ಜನಜಾತಿ ಸಾಂಸ್ಕೃತಿಕ ಸಮಾಗಮ–2026 ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಗಿರಿಜನ ಸುರಕ್ಷಾ ವೇದಿಕೆ ರಾಜ್ಯ ಸಂಯೋಜಕ ಗಂಗಾಧರ ನಾಯಕ್ ತಿಂಥಿಣಿ ಹೇಳಿದರು.</p>.<p>‘ವನವಾಸಿ, ಗ್ರಾಮವಾಸಿ, ನಗರವಾಸಿ — ನಾವೆಲ್ಲರೂ ಭಾರತವಾಸಿಗಳು; ನಮ್ಮೆಲ್ಲರ ರಕ್ತ ಒಂದೇ’ ಘೋಷವಾಕ್ಯದಡಿ ಈ ಸಮಾವೇಶ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುವರು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜನನಾಯಕ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ವರ್ಷದ ಅಂಗವಾಗಿ ಆಯೋಜನೆ ಆಗುತ್ತಿರುವ ಈ ಮಹಾಸಂಗಮದಲ್ಲಿ ದೇಶದ ವಿವಿಧ ರಾಜ್ಯಗಳ 500ಕ್ಕೂ ಹೆಚ್ಚು ಜನಜಾತಿ ಸಮುದಾಯಗಳಿಂದ 1.50 ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ’ ಎಂದರು.</p>.<p>‘ಜನಜಾತಿ ಸಮುದಾಯಗಳ ವೈವಿಧ್ಯಮಯ ವೇಷಭೂಷಣ, ಕಲಾ ಪರಂಪರೆ, ಜನಪದ ಸಂಸ್ಕೃತಿ ಹಾಗೂ ಜೀವನ ಶೈಲಿಯ ವೈಭವವು ಸಮಾವೇಶದಲ್ಲಿ ಅನಾವರಣಗೊಳ್ಳಲಿದೆ. ಜೊತೆಗೆ ಇದೊಂದು ಅತಿದೊಡ್ಡ ಗಿರಿಜನ ಸಾಂಸ್ಕೃತಿಕ ಸಮಾವೇಶವಾಗಲಿದೆ. ಯಾದಗಿರಿ ಜಿಲ್ಲೆಯಿಂದ 130ಕ್ಕೂ ಹೆಚ್ಚು ಗಿರಿಜನ ಸಮುದಾಯದ ಪ್ರತಿನಿಧಿಗಳು ಭಾಗವಹಿಸುವರು’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಯಂಕಪ್ಪ ಮಾಕಸಿ ಹೇಮನೂರು, ರಾಜಾ ಪಿಡ್ಡ ನಾಯಕ್, ಕಾಶಪ್ಪ ದೊರೆ ಅಬ್ಬೆತುಮಕೂರು, ಭೀಮಾಶಂಕರ ಮೇಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಗಿರಿಜನ ಸಮುದಾಯಗಳ ಸಾಂಸ್ಕೃತಿಕ ವೈಭವ, ಪರಂಪರೆ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಾರಲು ದೆಹಲಿಯಲ್ಲಿ ಮೇ 24ರಂದು ಜನಜಾತಿ ಸಾಂಸ್ಕೃತಿಕ ಸಮಾಗಮ–2026 ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಗಿರಿಜನ ಸುರಕ್ಷಾ ವೇದಿಕೆ ರಾಜ್ಯ ಸಂಯೋಜಕ ಗಂಗಾಧರ ನಾಯಕ್ ತಿಂಥಿಣಿ ಹೇಳಿದರು.</p>.<p>‘ವನವಾಸಿ, ಗ್ರಾಮವಾಸಿ, ನಗರವಾಸಿ — ನಾವೆಲ್ಲರೂ ಭಾರತವಾಸಿಗಳು; ನಮ್ಮೆಲ್ಲರ ರಕ್ತ ಒಂದೇ’ ಘೋಷವಾಕ್ಯದಡಿ ಈ ಸಮಾವೇಶ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುವರು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜನನಾಯಕ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿ ವರ್ಷದ ಅಂಗವಾಗಿ ಆಯೋಜನೆ ಆಗುತ್ತಿರುವ ಈ ಮಹಾಸಂಗಮದಲ್ಲಿ ದೇಶದ ವಿವಿಧ ರಾಜ್ಯಗಳ 500ಕ್ಕೂ ಹೆಚ್ಚು ಜನಜಾತಿ ಸಮುದಾಯಗಳಿಂದ 1.50 ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ’ ಎಂದರು.</p>.<p>‘ಜನಜಾತಿ ಸಮುದಾಯಗಳ ವೈವಿಧ್ಯಮಯ ವೇಷಭೂಷಣ, ಕಲಾ ಪರಂಪರೆ, ಜನಪದ ಸಂಸ್ಕೃತಿ ಹಾಗೂ ಜೀವನ ಶೈಲಿಯ ವೈಭವವು ಸಮಾವೇಶದಲ್ಲಿ ಅನಾವರಣಗೊಳ್ಳಲಿದೆ. ಜೊತೆಗೆ ಇದೊಂದು ಅತಿದೊಡ್ಡ ಗಿರಿಜನ ಸಾಂಸ್ಕೃತಿಕ ಸಮಾವೇಶವಾಗಲಿದೆ. ಯಾದಗಿರಿ ಜಿಲ್ಲೆಯಿಂದ 130ಕ್ಕೂ ಹೆಚ್ಚು ಗಿರಿಜನ ಸಮುದಾಯದ ಪ್ರತಿನಿಧಿಗಳು ಭಾಗವಹಿಸುವರು’ ಎಂದು ಹೇಳಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಯಂಕಪ್ಪ ಮಾಕಸಿ ಹೇಮನೂರು, ರಾಜಾ ಪಿಡ್ಡ ನಾಯಕ್, ಕಾಶಪ್ಪ ದೊರೆ ಅಬ್ಬೆತುಮಕೂರು, ಭೀಮಾಶಂಕರ ಮೇಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>