<p><strong>ಹುಣಸಗಿ:</strong> ತಾಲ್ಲೂಕಿನ ಕನಗಂಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಣಸಗಿ ಸಿಆರ್ಪಿ ಹಾಗೂ ಅಕ್ಷರ ದಾಸೋಹದ ಅಧಿಕಾರಿ ವಿರುದ್ಧವೂ ಕ್ರಮಕೈಗೊಳ್ಳುವಂತೆ ಹುಣಸಗಿ ತಾಲ್ಲೂಕು ಮಾದಿಗ ದಂಡೋರ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.</p>.<p>ಈ ಕುರಿತು ಬುಧವಾರ ಹುಣಸಗಿ ತಾಲ್ಲೂಕು ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸುರಪುರದ ಕ್ಷೇತ್ ರಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಆರು ತಿಂಗಳುಗಳಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡದಿರುವುದು ಮತ್ತು ಎಂಟು ದಿನಗಳ ಕಾಲ ಬಿಸಿ ಊಟ ನೀಡಿಲ್ಲ ಎಂಬ ಕಾರಣದಿಂದ ಮುಖ್ಯ ಶಿಕ್ಷಕರನ್ನು ಮಾತ್ರ ಅಮಾತುಗೊಳಿಸಲಾಗಿದೆ.</p>.<p>ಹುಣಸಗಿ ಕ್ಲಸ್ಟರ್ನ ಸಿಆರ್ಪಿ ಹಾಗೂ ಅಕ್ಷರ ದಾಸೋಹ ಅಧಿಕಾರಿಗಳನ್ನು ಅಮಾನತುಗೊಳಿಸದೇ ನೊಟೀಸ್ ನೀಡಿ ಕೈತೊಳೆದುಕೊಂಡಿರುವುದು ಖೇದಕರ ಎಂದು ಸಮಿತಿಯ ತಾಲ್ಲೂಕು ಅಧ್ಯಕ್ಷ ಮಾನಪ್ಪ ಕಟ್ಟಿಮನಿ ಆಕ್ರೋಶ ವ್ಯಕ್ತಪಡಿಸಿದರು.<br><br> ಹುಣಸಗಿ ಸಿಆರ್ಪಿ ಹಾಗೂ ಅಕ್ಷರ ದಾಸೋಹ ಅಧಿಕಾರಿಗಳನ್ನು ಅಮಾನತುಗೊಳಿಸದಿದ್ದಲ್ಲಿ ಡಿಸೆಂಬರ್ 5 ರಂದು ಸುರಪುರದ ಸುರಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎದುರು ಧರಣಿ ಹಮ್ಮಿಕೊಳ್ಳುವದಾಗಿ ಎಚ್ಚರಿಕೆ ನೀಡಿದ್ದಾರೆ.<br><br>ಪದಾಧಿಕಾರಿಗಳಾದ ಸಿದ್ದಣ್ಣ ಮೇಲಿನಮನಿ, ಮಂಜುನಾಥ ಚನ್ನೂರ, ಸೋಮಶೇಖರ ಆನೇಕಿ, ಮೌನೇಶ, ತಿಪ್ಪಣ್ಣ ಗೋಗಿ, ಭೀಮಣ್ಣ ಚಾನಿ, ತಿಪ್ಪಣ್ಣ ಬೇವಿನಗಿಡ, ಸಿದ್ದಣ್ಣ ಹೊಸಮನಿ, ಪ್ರಭು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ತಾಲ್ಲೂಕಿನ ಕನಗಂಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಣಸಗಿ ಸಿಆರ್ಪಿ ಹಾಗೂ ಅಕ್ಷರ ದಾಸೋಹದ ಅಧಿಕಾರಿ ವಿರುದ್ಧವೂ ಕ್ರಮಕೈಗೊಳ್ಳುವಂತೆ ಹುಣಸಗಿ ತಾಲ್ಲೂಕು ಮಾದಿಗ ದಂಡೋರ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.</p>.<p>ಈ ಕುರಿತು ಬುಧವಾರ ಹುಣಸಗಿ ತಾಲ್ಲೂಕು ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸುರಪುರದ ಕ್ಷೇತ್ ರಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಆರು ತಿಂಗಳುಗಳಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡದಿರುವುದು ಮತ್ತು ಎಂಟು ದಿನಗಳ ಕಾಲ ಬಿಸಿ ಊಟ ನೀಡಿಲ್ಲ ಎಂಬ ಕಾರಣದಿಂದ ಮುಖ್ಯ ಶಿಕ್ಷಕರನ್ನು ಮಾತ್ರ ಅಮಾತುಗೊಳಿಸಲಾಗಿದೆ.</p>.<p>ಹುಣಸಗಿ ಕ್ಲಸ್ಟರ್ನ ಸಿಆರ್ಪಿ ಹಾಗೂ ಅಕ್ಷರ ದಾಸೋಹ ಅಧಿಕಾರಿಗಳನ್ನು ಅಮಾನತುಗೊಳಿಸದೇ ನೊಟೀಸ್ ನೀಡಿ ಕೈತೊಳೆದುಕೊಂಡಿರುವುದು ಖೇದಕರ ಎಂದು ಸಮಿತಿಯ ತಾಲ್ಲೂಕು ಅಧ್ಯಕ್ಷ ಮಾನಪ್ಪ ಕಟ್ಟಿಮನಿ ಆಕ್ರೋಶ ವ್ಯಕ್ತಪಡಿಸಿದರು.<br><br> ಹುಣಸಗಿ ಸಿಆರ್ಪಿ ಹಾಗೂ ಅಕ್ಷರ ದಾಸೋಹ ಅಧಿಕಾರಿಗಳನ್ನು ಅಮಾನತುಗೊಳಿಸದಿದ್ದಲ್ಲಿ ಡಿಸೆಂಬರ್ 5 ರಂದು ಸುರಪುರದ ಸುರಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎದುರು ಧರಣಿ ಹಮ್ಮಿಕೊಳ್ಳುವದಾಗಿ ಎಚ್ಚರಿಕೆ ನೀಡಿದ್ದಾರೆ.<br><br>ಪದಾಧಿಕಾರಿಗಳಾದ ಸಿದ್ದಣ್ಣ ಮೇಲಿನಮನಿ, ಮಂಜುನಾಥ ಚನ್ನೂರ, ಸೋಮಶೇಖರ ಆನೇಕಿ, ಮೌನೇಶ, ತಿಪ್ಪಣ್ಣ ಗೋಗಿ, ಭೀಮಣ್ಣ ಚಾನಿ, ತಿಪ್ಪಣ್ಣ ಬೇವಿನಗಿಡ, ಸಿದ್ದಣ್ಣ ಹೊಸಮನಿ, ಪ್ರಭು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>