<p><strong>ವಡಗೇರಾ:</strong> ವಡಗೇರಾ ತಾಲ್ಲೂಕಿನ ಬಬಲಾದ ಗ್ರಾಮದ ಹತ್ತಿರ ಘನತ್ಯಾಜ್ಯ ಘಟಕದಲ್ಲಿ ತ್ಯಾಜ್ಯವನ್ನು ಹಾಕುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮಂಗಳವಾರ ಬಬಲಾದ ಗ್ರಾಮದ ಗೇಟ್ ಹತ್ತಿರ ಪ್ರತಿಭಟನೆ ನಡೆಸಿದರು.</p>.<p>ಬೀದರ್ ಹಾಗೂ ಕಲಬುರಗಿ ವೈದ್ಯಕೀಯ ಆಸ್ಪತ್ರೆಗಳ ಘನ ತ್ಯಾಜ್ಯವನ್ನು ಇಲ್ಲಿ ತಂದು ಹಾಕುತ್ತಿರುವುದರಿಂದ ಸುತ್ತಲಿನ ಪರಿಸರ ಸಂಪೂರ್ಣವಾಗಿ ಹಾಳಾಗಿದೆ. ಕೂಡಲೇ ಇಲ್ಲಿ ಘನ ತ್ಯಾಜ್ಯವನ್ನು ಹಾಕುವುದನ್ನು ನಿಲ್ಲಿಸದಿದ್ದರೆ ಇದೇ 25ರಂದು ಯಾದಗಿರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ವಡಗೇರಾ ತಹಶೀಲ್ದಾರ್ ಶ್ರೀನಿವಾಸ ಚಾಪೇಲ್ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಪತ್ರ ಸ್ವೀಕರಿಸಿದ ತಹಶೀಲ್ದಾರ್, ಸಮಸ್ಯೆಯನ್ನು ಈ ಕೂಡಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದ ನಂತರ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು</p>.<p>ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಗೌತಮ ಕ್ರಾಂತಿ, ಅಜೀಜ್ ಐಕೂರ, ಮಲ್ಲಿಕಾರ್ಜುನ ಶಾಖಾ, ನಿಂಗಣ್ಣ, ಕಟಗಿ, ಗಂಗಾರಾಮ್ ಕೊರಬಾರ್, ಈಶ್ವರ ಕ್ರಾಂತಿ ಬಬಲಾದ, ಪೂಜಾರಿ, ದೇವಿಕೆಮ್ಮ ಬಬಲಾದ, ನಾಗವೇಣಿ, ಲಕ್ಷ್ಮಿ, ನರಸಪ್ಪ, ಜ್ಯೋತಿ, ಇತತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ವಡಗೇರಾ ತಾಲ್ಲೂಕಿನ ಬಬಲಾದ ಗ್ರಾಮದ ಹತ್ತಿರ ಘನತ್ಯಾಜ್ಯ ಘಟಕದಲ್ಲಿ ತ್ಯಾಜ್ಯವನ್ನು ಹಾಕುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮಂಗಳವಾರ ಬಬಲಾದ ಗ್ರಾಮದ ಗೇಟ್ ಹತ್ತಿರ ಪ್ರತಿಭಟನೆ ನಡೆಸಿದರು.</p>.<p>ಬೀದರ್ ಹಾಗೂ ಕಲಬುರಗಿ ವೈದ್ಯಕೀಯ ಆಸ್ಪತ್ರೆಗಳ ಘನ ತ್ಯಾಜ್ಯವನ್ನು ಇಲ್ಲಿ ತಂದು ಹಾಕುತ್ತಿರುವುದರಿಂದ ಸುತ್ತಲಿನ ಪರಿಸರ ಸಂಪೂರ್ಣವಾಗಿ ಹಾಳಾಗಿದೆ. ಕೂಡಲೇ ಇಲ್ಲಿ ಘನ ತ್ಯಾಜ್ಯವನ್ನು ಹಾಕುವುದನ್ನು ನಿಲ್ಲಿಸದಿದ್ದರೆ ಇದೇ 25ರಂದು ಯಾದಗಿರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಬಂದ ವಡಗೇರಾ ತಹಶೀಲ್ದಾರ್ ಶ್ರೀನಿವಾಸ ಚಾಪೇಲ್ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಪತ್ರ ಸ್ವೀಕರಿಸಿದ ತಹಶೀಲ್ದಾರ್, ಸಮಸ್ಯೆಯನ್ನು ಈ ಕೂಡಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದ ನಂತರ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು</p>.<p>ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಗೌತಮ ಕ್ರಾಂತಿ, ಅಜೀಜ್ ಐಕೂರ, ಮಲ್ಲಿಕಾರ್ಜುನ ಶಾಖಾ, ನಿಂಗಣ್ಣ, ಕಟಗಿ, ಗಂಗಾರಾಮ್ ಕೊರಬಾರ್, ಈಶ್ವರ ಕ್ರಾಂತಿ ಬಬಲಾದ, ಪೂಜಾರಿ, ದೇವಿಕೆಮ್ಮ ಬಬಲಾದ, ನಾಗವೇಣಿ, ಲಕ್ಷ್ಮಿ, ನರಸಪ್ಪ, ಜ್ಯೋತಿ, ಇತತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>