ಯಾದಗಿರಿ: ನಗರದ ಹೊರವಲಯದ ಕರ್ನಾಟಕ ರಾಜ್ಯ ಪಾನಿಯ ನಿಗಮ ನಿಯಮಿತ (ಮದ್ಯ ಸಂಗ್ರಹ ಮಳಿಗೆ) ಆವರಣದಲ್ಲಿ ಅವಧಿ ಮುಗಿದ ₹ 14.50 ಲಕ್ಷ ಮೌಲ್ಯದ ಮದ್ಯವನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಮಹ್ಮದ್ ಇಸ್ಮಾಯಿಲ್ ಮದ್ಯ ಸಂಗ್ರಹ ಮಳಿಗೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಪರಿಸರಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸಿ ನಿರ್ಮಾಣ ಮಾಡಿದ ದೊಡ್ಡ ಗುಂಡಿಯಲ್ಲಿ ಸುರಿದು ನಂತರ ಮಣ್ಣು ಮುಚ್ಚಿಸಿದರು.
ಅಬಕಾರಿ ಇಲಾಖೆ ನಿರೀಕ್ಷಕ ಶಬ್ಬಿರ್, ಉಪತಹಶೀಲ್ದಾರ್ ಮಲ್ಲಿಕಾರ್ಜುನ್ ತಂಗಡಗಿ, ಮದ್ಯ ಸಂಗ್ರಹ ಮಳಿಗೆ ವ್ಯವಸ್ಥಾಪಕ ವೆಂಕಟೇಶ, ಅಡಿವೆಪ್ಪ ಭಜಂತ್ರಿ, ಎಂ.ಎಸ್ ಪಾಟೀಲ, ಯಲ್ಲಾರೆಡ್ಡಿ, ವೆಂಕಟೇಶ ಹಾಗೂ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.