ಶಂಕರಗೌಡ ಎಸ್.ಸೋಮನಾಳ ಮಾತನಾಡಿ, ನೊಂದ ಜೀವಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಜಾಗೃತಿ ಮತ್ತು ಉಸ್ತುವಾರಿ ಸಮಿತಿಯು ಮಾಡುತ್ತದೆ. ಸಮಿತಿಯ ಎಲ್ಲಾ ಸದಸ್ಯರು ಕಡ್ಡಾಯವಾಗಿ ಸಭೆಗೆ ಹಾಜರಾಗಿ ಇಲ್ಲಿ ನಡೆಯುವ ಚರ್ಚೆ, ತೀರ್ಮಾನಗಳ ಅನುಸಾರ ಕಾರ್ಯ ನಿರ್ವಹಿಸಬೇಕು. ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.