ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ದಿಗೆ ಒತ್ತು: ಶಾಸಕ ಮುದ್ನಾಳ

Last Updated 9 ಜುಲೈ 2020, 8:10 IST
ಅಕ್ಷರ ಗಾತ್ರ

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿದ ಯಾದಗಿರಿ ತಾಲ್ಲೂಕಿನ ‘ಮೈಲಾಪುರ ಮಲ್ಲಯ್ಯ’ ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಲಾಗುವುದು ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.

ಬುಧವಾರ ತಾಲ್ಲೂಕಿನ ಮೈಲಾಪುರದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಲೊಕೋಪಯೋಗಿ ಇಲಾಖೆಯಿಂದ ₹1 ಕೋಟಿ ವೆಚ್ಚದ ಯಾತ್ರಿ ನಿವಾಸ ಹಾಗೂ ರಸ್ತೆ, ಚರಂಡಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾವು ಮೊದಲು ಇಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ರಾಚನಗೌಡ ಮುದ್ನಾಳ, ಜಿಪಂ ಸದಸ್ಯ ಅಮರದೀಪ್ ನಾಯಕ್, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಎಇಇ ವಿಶ್ವನಾಥರಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT