<p><strong>ಸುರಪುರ</strong>: ‘ಸರ್ಕಾರ ನೀಡಿರುವ ಗಡುವಿನಲ್ಲಿ ಸಮೀಕ್ಷೆ ಮುಗಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಸೂಚಿಸಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಮುಂಗಾರು ಹಂಗಾಮಿನ ರೈತರಿಂದಲೇ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಕ್ಕೇರಾ ಭಾಗದಲ್ಲಿ 19,834 ಎಕರೆ ಬೆಳೆಯಲ್ಲಿ 1,448 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ಒಳಪಡಿಸಲಾಗಿದೆ. ಕೆಂಭಾವಿ ಹೋಬಳಿಯಲ್ಲಿ 24,339 ಎಕರೆಯಲ್ಲಿ 1,832 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ನೊಂದಾಯಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನಲ್ಲಿ ಬೆಳೆ ಸಮೀಕ್ಷೆಯ ಕರ್ತವ್ಯದಲ್ಲಿರುವ ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ತಮಗೆ ಕೆಲಸವೇ ಇಲ್ಲವೆಂದು ನಿಶ್ಚಯಿಸಿಬಿಟ್ಟಿದ್ದಾರೆ. ಇದರಿಂದ ಕೇವಲ ಶೇ 5 ಗುರಿ ಸಾಧಿಸಲಾಗಿದೆ. ಉಳಿದಿರುವ 20 ದಿನದಲ್ಲಿ ಶೇ 95ರಷ್ಟು ಗುರಿ ತಲುಪಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು’ ಎಂದು ಖಡಕ್ ಆಗಿ ನಿರ್ದೇಶನ ನೀಡಿದರು.</p>.<p>ಉಪ ಕೃಷಿ ನಿರ್ದೇಶಕ ಡಾ. ಬಾಲರಾಜ್ ರಂಗರಾವ್ ಮಾತನಾಡಿ, ಇಡೀ ಜಿಲ್ಲೆಯಲ್ಲಿ ಶೇ 19 ರಷ್ಟು ಮಾತ್ರ ಗುರಿ ಸಾಧಿಸಲಾಗಿದೆ. ಮಾಹಿತಿ ಇಲ್ಲದ ರೈತರಿಗೆ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ವರದಿ ದಾಖಲಿಸಿಕೊಳ್ಳುವುದನ್ನು ತಿಳಿಸಿಕೊಡಬೇಕು’ ಎಂದು ಸೂಚನೆ ನೀಡಿದರು.</p>.<p>ಗ್ರೇಡ್- 2 ತಹಶೀಲ್ದಾರ್ ಸೋಫಿಯಾ ಸುಲ್ತಾನ್, ಕಂದಾಯ ನಿರೀಕ್ಷರಾದ ಗುರುಬಸಪ್ಪ, ರಾಜೇಶ್ ಸಾಬ್, ವಿಠ್ಠಲ್ ಬಂದಾಳ, ಎಡಿಎ ಗುರುನಾಥ್, ಕೃಷಿ ಅಧಿಕಾರಿಗಳಾದ ಭೀಮರಾಯ, ಪ್ರಕಾಶ, ಗ್ರಾಮಲೆಕ್ಕಿಗರಾದ ಪ್ರದೀಪ ಕುಮಾರ, ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಸರ್ಕಾರ ನೀಡಿರುವ ಗಡುವಿನಲ್ಲಿ ಸಮೀಕ್ಷೆ ಮುಗಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಸೂಚಿಸಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಮುಂಗಾರು ಹಂಗಾಮಿನ ರೈತರಿಂದಲೇ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಕ್ಕೇರಾ ಭಾಗದಲ್ಲಿ 19,834 ಎಕರೆ ಬೆಳೆಯಲ್ಲಿ 1,448 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ಒಳಪಡಿಸಲಾಗಿದೆ. ಕೆಂಭಾವಿ ಹೋಬಳಿಯಲ್ಲಿ 24,339 ಎಕರೆಯಲ್ಲಿ 1,832 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ನೊಂದಾಯಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನಲ್ಲಿ ಬೆಳೆ ಸಮೀಕ್ಷೆಯ ಕರ್ತವ್ಯದಲ್ಲಿರುವ ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ತಮಗೆ ಕೆಲಸವೇ ಇಲ್ಲವೆಂದು ನಿಶ್ಚಯಿಸಿಬಿಟ್ಟಿದ್ದಾರೆ. ಇದರಿಂದ ಕೇವಲ ಶೇ 5 ಗುರಿ ಸಾಧಿಸಲಾಗಿದೆ. ಉಳಿದಿರುವ 20 ದಿನದಲ್ಲಿ ಶೇ 95ರಷ್ಟು ಗುರಿ ತಲುಪಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು’ ಎಂದು ಖಡಕ್ ಆಗಿ ನಿರ್ದೇಶನ ನೀಡಿದರು.</p>.<p>ಉಪ ಕೃಷಿ ನಿರ್ದೇಶಕ ಡಾ. ಬಾಲರಾಜ್ ರಂಗರಾವ್ ಮಾತನಾಡಿ, ಇಡೀ ಜಿಲ್ಲೆಯಲ್ಲಿ ಶೇ 19 ರಷ್ಟು ಮಾತ್ರ ಗುರಿ ಸಾಧಿಸಲಾಗಿದೆ. ಮಾಹಿತಿ ಇಲ್ಲದ ರೈತರಿಗೆ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ವರದಿ ದಾಖಲಿಸಿಕೊಳ್ಳುವುದನ್ನು ತಿಳಿಸಿಕೊಡಬೇಕು’ ಎಂದು ಸೂಚನೆ ನೀಡಿದರು.</p>.<p>ಗ್ರೇಡ್- 2 ತಹಶೀಲ್ದಾರ್ ಸೋಫಿಯಾ ಸುಲ್ತಾನ್, ಕಂದಾಯ ನಿರೀಕ್ಷರಾದ ಗುರುಬಸಪ್ಪ, ರಾಜೇಶ್ ಸಾಬ್, ವಿಠ್ಠಲ್ ಬಂದಾಳ, ಎಡಿಎ ಗುರುನಾಥ್, ಕೃಷಿ ಅಧಿಕಾರಿಗಳಾದ ಭೀಮರಾಯ, ಪ್ರಕಾಶ, ಗ್ರಾಮಲೆಕ್ಕಿಗರಾದ ಪ್ರದೀಪ ಕುಮಾರ, ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>