ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಸಮೀಕ್ಷೆ ನಿಗದಿತ ಅವಧಿಯಲ್ಲಿ ಮುಗಿಸಲು ದೇವಿಕಾ ಸೂಚನೆ

Last Updated 4 ಸೆಪ್ಟೆಂಬರ್ 2020, 16:19 IST
ಅಕ್ಷರ ಗಾತ್ರ

ಸುರಪುರ: ‘ಸರ್ಕಾರ ನೀಡಿರುವ ಗಡುವಿನಲ್ಲಿ ಸಮೀಕ್ಷೆ ಮುಗಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಸೂಚಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಮುಂಗಾರು ಹಂಗಾಮಿನ ರೈತರಿಂದಲೇ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಕ್ಕೇರಾ ಭಾಗದಲ್ಲಿ 19,834 ಎಕರೆ ಬೆಳೆಯಲ್ಲಿ 1,448 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ಒಳಪಡಿಸಲಾಗಿದೆ. ಕೆಂಭಾವಿ ಹೋಬಳಿಯಲ್ಲಿ 24,339 ಎಕರೆಯಲ್ಲಿ 1,832 ಎಕರೆ ಮಾತ್ರ ಬೆಳೆ ಸಮೀಕ್ಷೆಗೆ ನೊಂದಾಯಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ತಾಲ್ಲೂಕಿನಲ್ಲಿ ಬೆಳೆ ಸಮೀಕ್ಷೆಯ ಕರ್ತವ್ಯದಲ್ಲಿರುವ ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ತಮಗೆ ಕೆಲಸವೇ ಇಲ್ಲವೆಂದು ನಿಶ್ಚಯಿಸಿಬಿಟ್ಟಿದ್ದಾರೆ. ಇದರಿಂದ ಕೇವಲ ಶೇ 5 ಗುರಿ ಸಾಧಿಸಲಾಗಿದೆ. ಉಳಿದಿರುವ 20 ದಿನದಲ್ಲಿ ಶೇ 95ರಷ್ಟು ಗುರಿ ತಲುಪಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು’ ಎಂದು ಖಡಕ್‌ ಆಗಿ ನಿರ್ದೇಶನ ನೀಡಿದರು.

ಉಪ ಕೃಷಿ ನಿರ್ದೇಶಕ ಡಾ. ಬಾಲರಾಜ್ ರಂಗರಾವ್ ಮಾತನಾಡಿ, ಇಡೀ ಜಿಲ್ಲೆಯಲ್ಲಿ ಶೇ 19 ರಷ್ಟು ಮಾತ್ರ ಗುರಿ ಸಾಧಿಸಲಾಗಿದೆ. ಮಾಹಿತಿ ಇಲ್ಲದ ರೈತರಿಗೆ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ವರದಿ ದಾಖಲಿಸಿಕೊಳ್ಳುವುದನ್ನು ತಿಳಿಸಿಕೊಡಬೇಕು’ ಎಂದು ಸೂಚನೆ ನೀಡಿದರು.

ಗ್ರೇಡ್- 2 ತಹಶೀಲ್ದಾರ್ ಸೋಫಿಯಾ ಸುಲ್ತಾನ್, ಕಂದಾಯ ನಿರೀಕ್ಷರಾದ ಗುರುಬಸಪ್ಪ, ರಾಜೇಶ್ ಸಾಬ್, ವಿಠ್ಠಲ್ ಬಂದಾಳ, ಎಡಿಎ ಗುರುನಾಥ್, ಕೃಷಿ ಅಧಿಕಾರಿಗಳಾದ ಭೀಮರಾಯ, ಪ್ರಕಾಶ, ಗ್ರಾಮಲೆಕ್ಕಿಗರಾದ ಪ್ರದೀಪ ಕುಮಾರ, ಶಿವಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT