<p><strong>ಯಾದಗಿರಿ: </strong>ಮಕರ ಸಂಕ್ರಾಂತಿ ಹಬ್ಬವನ್ನು ಜಿಲ್ಲೆಯಾದ್ಯಂತ ಸರಳವಾಗಿ ಆಚರಣೆ ಮಾಡಲಾಯಿತು. ಬೆಳಿಗ್ಗೆಯೇ ಮನೆ ಮುಂದೆ ವಿವಿಧ ಬಣ್ಣದ ರಂಗೋಲಿ ಬಿಡಿಸಲಾಗಿತ್ತು.</p>.<p>ಎಳ್ಳು ಬೆಲ್ಲ ಹಂಚಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಸಾಮಾನ್ಯವಾಗಿ ಕಂಡು ಬಂದಿತು. ಸಿಹಿ ತಯಾರಿಸಿರುವುದು ಕಂಡು ಬಂದಿತು.</p>.<p>ಕರಿ, ಬಿಳಿ ಎಳ್ಳು, ಬೆಲ್ಲ, ಪುಟಾಣಿ, ಕೊಬ್ಬರಿ, ಬಾದಾಮಿ, ಕಬ್ಬು, ಬಾಳೆಹಣ್ಣು, ಹಸಿ ಕಡಲೆ ಬೀರಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಸಾಮಾನ್ಯವಾಗಿತ್ತು. ‘ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡು’ ಎನ್ನುವುದು ಸಾಮಾನ್ಯವಾಗಿತ್ತು.</p>.<p>ಸಂಜೆ ವೇಳೆ ಹೆಣ್ಣುಮಕ್ಕಳು ಅಕ್ಕಪಕ್ಕದ ಮನೆಗಳಿಗೆ ತೆರಳಿ ಎಳ್ಳು ಹಂಚಿದರು. ಚಿಕ್ಕಮಕ್ಕಳ ಸಂಭ್ರಮ ಎದ್ದುಕಾಣುತ್ತಿತ್ತು.</p>.<p class="Subhead">ನದಿಗಳಲ್ಲಿ ಪುಣ್ಯಸ್ನಾನ: ಜಿಲ್ಲೆಯ ಕೃಷ್ಣಾ, ಭೀಮಾ ನದಿ ತೀರದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ಸಾರ್ವಜನಿಕರು ಪುಣ್ಯಸ್ನಾನ ಮಾಡಿದರು.</p>.<p>ನಗರದ ಹೊರವಲಯದ ಭೀಮಾ ನದಿ ಸೇತುವೆ ಬಳಿ ಪುಣ್ಯ ಸ್ನಾನ ಮಾಡಿದರು. ಅಲ್ಲದೆ ಭೀಮಾ, ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಹೊಳೆದಂಡಿಗೆ ಸಾಮೂಹಿಕ ಭೋಜನದ ವ್ಯವಸ್ಥೆ ಕೂಡ ಮಾಡಲಾಗಿತ್ತು.</p>.<p class="Subhead">ಹೊಳೆ ದಂಡಿಗೆ ಜನಜಂಗುಳಿ: ವಡಗೇರಾ ತಾಲ್ಲೂಕು ಹಾಲಗೇರಾ ಗ್ರಾಮದ ಹೊರವಲಯದಲ್ಲಿ ಭೀಮಾ ನದಿ ಹೊಳೆದಂಡಿಗೆ ಗ್ರಾಮಸ್ಥರು ಸೇರಿ ಸಾಮೂಹಿಕ ಭೋಜನೆ<br />ಸವಿದರು.</p>.<p class="Subhead">ವಿವಿಧ ಭಕ್ಷ್ಯಗಳ ತಯಾರಿ: ಮಕರ ಸಂಕ್ರಾಂತಿ ಅಂಗವಾಗಿ ಮನೆಗಳಲ್ಲಿ ವಿವಿಧ ಭಕ್ಷ್ಯ ಭೋಜನ ಸಿದ್ಧ ಮಾಡಲಾಗಿತ್ತು. ನದಿ ದಂಡೆಗೆ ಬುತ್ತಿ ಕಟ್ಟಿಕೊಂಡು ಹೋಗಿ ಕುಟುಂಬ, ಸಂಬಂಧಿಕರು, ಗ್ರಾಮಸ್ಥರು ಸೇರಿ ಭೋಜನ ಸವಿದರು.</p>.<p>ಎಳ್ಳು ಹಚ್ಚಿದ ಸಜ್ಜೆ ರೊಟ್ಟಿ, ಜೋಳದ ರೊಟ್ಟಿ, ಶೇಂಗಾ ಹೋಳಿಗೆ, ಹೂರಣ ಹೋಳಿಗೆ, ಬದನೆಕಾಯಿ ಪಲ್ಯೆ, ಬಾರ್ತಾ, ಪುಂಡಿಪಲ್ಯೆ ಸೇರಿದಂತೆ ವಿವಿಧ ಖಾದ್ಯ ತಯಾರಿಸಲಾಗಿತ್ತು.</p>.<p class="Subhead">ಗವಿಸಿದ್ದಲಿಂಗೇಶ್ವರ ದೇವಸ್ಥಾನ ಭಕ್ತರು: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಿಂತನಹಳ್ಳಿ ಗ್ರಾಮದ ಗವಿಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಭಕ್ತರು ದೇವರ ದರ್ಶನ<br />ಪಡೆದರು.</p>.<p>ಗವಿ ಮೇಲೆಗಡೆಯಿಂದ ನೀರು ಧುಮ್ಮಿಕ್ಕುತ್ತಿದ್ದು, ಭಕ್ತರ ಸ್ನಾನ ಮಾಡಿ ದೇವರ ದರ್ಶನ ಪಡೆದರು. ಆಟೊ, ಟಂಟಂ, ಕಾರು, ಬೈಕ್ಗಳಲ್ಲಿ ಭಕ್ತರು ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಮಕರ ಸಂಕ್ರಾಂತಿ ಹಬ್ಬವನ್ನು ಜಿಲ್ಲೆಯಾದ್ಯಂತ ಸರಳವಾಗಿ ಆಚರಣೆ ಮಾಡಲಾಯಿತು. ಬೆಳಿಗ್ಗೆಯೇ ಮನೆ ಮುಂದೆ ವಿವಿಧ ಬಣ್ಣದ ರಂಗೋಲಿ ಬಿಡಿಸಲಾಗಿತ್ತು.</p>.<p>ಎಳ್ಳು ಬೆಲ್ಲ ಹಂಚಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಸಾಮಾನ್ಯವಾಗಿ ಕಂಡು ಬಂದಿತು. ಸಿಹಿ ತಯಾರಿಸಿರುವುದು ಕಂಡು ಬಂದಿತು.</p>.<p>ಕರಿ, ಬಿಳಿ ಎಳ್ಳು, ಬೆಲ್ಲ, ಪುಟಾಣಿ, ಕೊಬ್ಬರಿ, ಬಾದಾಮಿ, ಕಬ್ಬು, ಬಾಳೆಹಣ್ಣು, ಹಸಿ ಕಡಲೆ ಬೀರಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಸಾಮಾನ್ಯವಾಗಿತ್ತು. ‘ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡು’ ಎನ್ನುವುದು ಸಾಮಾನ್ಯವಾಗಿತ್ತು.</p>.<p>ಸಂಜೆ ವೇಳೆ ಹೆಣ್ಣುಮಕ್ಕಳು ಅಕ್ಕಪಕ್ಕದ ಮನೆಗಳಿಗೆ ತೆರಳಿ ಎಳ್ಳು ಹಂಚಿದರು. ಚಿಕ್ಕಮಕ್ಕಳ ಸಂಭ್ರಮ ಎದ್ದುಕಾಣುತ್ತಿತ್ತು.</p>.<p class="Subhead">ನದಿಗಳಲ್ಲಿ ಪುಣ್ಯಸ್ನಾನ: ಜಿಲ್ಲೆಯ ಕೃಷ್ಣಾ, ಭೀಮಾ ನದಿ ತೀರದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ಸಾರ್ವಜನಿಕರು ಪುಣ್ಯಸ್ನಾನ ಮಾಡಿದರು.</p>.<p>ನಗರದ ಹೊರವಲಯದ ಭೀಮಾ ನದಿ ಸೇತುವೆ ಬಳಿ ಪುಣ್ಯ ಸ್ನಾನ ಮಾಡಿದರು. ಅಲ್ಲದೆ ಭೀಮಾ, ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಹೊಳೆದಂಡಿಗೆ ಸಾಮೂಹಿಕ ಭೋಜನದ ವ್ಯವಸ್ಥೆ ಕೂಡ ಮಾಡಲಾಗಿತ್ತು.</p>.<p class="Subhead">ಹೊಳೆ ದಂಡಿಗೆ ಜನಜಂಗುಳಿ: ವಡಗೇರಾ ತಾಲ್ಲೂಕು ಹಾಲಗೇರಾ ಗ್ರಾಮದ ಹೊರವಲಯದಲ್ಲಿ ಭೀಮಾ ನದಿ ಹೊಳೆದಂಡಿಗೆ ಗ್ರಾಮಸ್ಥರು ಸೇರಿ ಸಾಮೂಹಿಕ ಭೋಜನೆ<br />ಸವಿದರು.</p>.<p class="Subhead">ವಿವಿಧ ಭಕ್ಷ್ಯಗಳ ತಯಾರಿ: ಮಕರ ಸಂಕ್ರಾಂತಿ ಅಂಗವಾಗಿ ಮನೆಗಳಲ್ಲಿ ವಿವಿಧ ಭಕ್ಷ್ಯ ಭೋಜನ ಸಿದ್ಧ ಮಾಡಲಾಗಿತ್ತು. ನದಿ ದಂಡೆಗೆ ಬುತ್ತಿ ಕಟ್ಟಿಕೊಂಡು ಹೋಗಿ ಕುಟುಂಬ, ಸಂಬಂಧಿಕರು, ಗ್ರಾಮಸ್ಥರು ಸೇರಿ ಭೋಜನ ಸವಿದರು.</p>.<p>ಎಳ್ಳು ಹಚ್ಚಿದ ಸಜ್ಜೆ ರೊಟ್ಟಿ, ಜೋಳದ ರೊಟ್ಟಿ, ಶೇಂಗಾ ಹೋಳಿಗೆ, ಹೂರಣ ಹೋಳಿಗೆ, ಬದನೆಕಾಯಿ ಪಲ್ಯೆ, ಬಾರ್ತಾ, ಪುಂಡಿಪಲ್ಯೆ ಸೇರಿದಂತೆ ವಿವಿಧ ಖಾದ್ಯ ತಯಾರಿಸಲಾಗಿತ್ತು.</p>.<p class="Subhead">ಗವಿಸಿದ್ದಲಿಂಗೇಶ್ವರ ದೇವಸ್ಥಾನ ಭಕ್ತರು: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಿಂತನಹಳ್ಳಿ ಗ್ರಾಮದ ಗವಿಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಭಕ್ತರು ದೇವರ ದರ್ಶನ<br />ಪಡೆದರು.</p>.<p>ಗವಿ ಮೇಲೆಗಡೆಯಿಂದ ನೀರು ಧುಮ್ಮಿಕ್ಕುತ್ತಿದ್ದು, ಭಕ್ತರ ಸ್ನಾನ ಮಾಡಿ ದೇವರ ದರ್ಶನ ಪಡೆದರು. ಆಟೊ, ಟಂಟಂ, ಕಾರು, ಬೈಕ್ಗಳಲ್ಲಿ ಭಕ್ತರು ತೆರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>