<p><strong>ಯಾದಗಿರಿ</strong>: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಿನ್ನಾಕಾರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಸಾಮಾಜಿಕ ಬಹಿಷ್ಕಾರದ ಆರೋಪ ಕೇಳಿಬಂದ ಹಿನ್ನೆಲೆ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳ ತಂಡ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ, ಸಭೆ ನಡೆಸಿತು.</p>.<p>ಗ್ರಾಮದಲ್ಲಿನ 9 ಗುಂಟೆ ಸರ್ಕಾರಿ ಜಮೀನಿನಲ್ಲಿ 6 ಗುಂಟೆ ಸಮಾಜ ಕಲ್ಯಾಣ ಇಲಾಖೆಗೆ ಈ ಹಿಂದೆಯೇ ನೀಡಲಾಗಿತ್ತು. ಉಳಿದ 3 ಗುಂಟೆ ಜಮೀನಿನಲ್ಲಿ ಈಚೆಗೆ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಂದ ಹಿನ್ನೆಲೆ 3 ಗುಂಟೆ ಸ್ಥಳದಲ್ಲಿ ಕಟ್ಟಡ ನಿರ್ಮಿಸಲು ನಿರ್ಧರಿಸಿದ ನಂತರ ಸಮಸ್ಯೆ ಕಾಣಿಸಿಕೊಂಡಿದೆ.</p>.<p>ವರದಿ ಸಲ್ಲಿಸಲು ಸೂಚನೆ: 3 ಗುಂಟೆ ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿ ಸುಶೀಲಾ ಜಿ. ಅವರು ತಹಶೀಲ್ದಾರ್ ಶಾಂತಗೌಡ ಬಿರಾದರ ಅವರಿಗೆ ಸೂಚಿಸಿದರು.</p>.<p>ಕೂಡಲೇ ವರದಿ ನೀಡಿದರೆ, ಸ್ಥಳದ ಕುರಿತಾಗಿ ಮುಂದಿನ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.<br /> ಸಾಮರಸ್ಯಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead">ಶಾಂತಿ ಸಭೆ: ಜಿಲ್ಲಾಧಿಕಾರಿ ಸೂಚನೆಯಂತೆ ಮಂಗಳವಾರ ತಹಶೀಲ್ದಾರ್, ಡಿವೈಎಸ್ಪಿ, ತಾಪಂ ಇಒ, ಸಮಾಜ ಕಲ್ಯಾಣ ಇಲಾಖೆಯ ಎಡಿ, ಪಿಡಿಒ ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಅಧಿಕಾರಿಗಳು ಗ್ರಾಮದಲ್ಲಿ ಸಭೆ ನಡೆಸಿದರು.</p>.<p class="Subhead">ತಾರತಮ್ಯ ಮಾಡದಂತೆ ತಾಕೀತು: ಗ್ರಾಮದಲ್ಲಿನ ಕ್ಷೌರದಂಗಡಿ, ಹೋಟೆಲ್ ಸೇರಿದಂತೆ ಎಲ್ಲಾ ರೀತಿಯ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ತಾರತಮ್ಯ ಮಾಡದಂತೆ, ನಿಗದಿತ ದರದಂತೆ ಹಣ ನೀಡಿದರೆ ಅವರಿಗೆ ವಸ್ತುಗಳನ್ನು ಮಾರಾಟ ಮಾಡುವಂತೆ, ಸೇವೆ ನೀಡುವಂತೆ ಅಧಿಕಾರಿಗಳ ತಂಡ ತಿಳಿವಳಿಕೆ ಪತ್ರಗಳನ್ನು ನೀಡಿ, ತಾಕೀತು ಮಾಡಿತು.</p>.<p class="Subhead">ಷೋಕಾಸ್ ನೋಟಿಸ್: ಕ್ಷೌರದಂಗಡಿಯಲ್ಲಿ ಕ್ಷೌರ ಮಾಡಲು ಬಹಿಷ್ಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಅಂಗಡಿಗೆ ಕಾರಣ ಕೇಳಿ ನೋಟಿಸ್ ನೀಡಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಿನ್ನಾಕಾರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಸಾಮಾಜಿಕ ಬಹಿಷ್ಕಾರದ ಆರೋಪ ಕೇಳಿಬಂದ ಹಿನ್ನೆಲೆ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಅಧಿಕಾರಿಗಳ ತಂಡ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ, ಸಭೆ ನಡೆಸಿತು.</p>.<p>ಗ್ರಾಮದಲ್ಲಿನ 9 ಗುಂಟೆ ಸರ್ಕಾರಿ ಜಮೀನಿನಲ್ಲಿ 6 ಗುಂಟೆ ಸಮಾಜ ಕಲ್ಯಾಣ ಇಲಾಖೆಗೆ ಈ ಹಿಂದೆಯೇ ನೀಡಲಾಗಿತ್ತು. ಉಳಿದ 3 ಗುಂಟೆ ಜಮೀನಿನಲ್ಲಿ ಈಚೆಗೆ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಂದ ಹಿನ್ನೆಲೆ 3 ಗುಂಟೆ ಸ್ಥಳದಲ್ಲಿ ಕಟ್ಟಡ ನಿರ್ಮಿಸಲು ನಿರ್ಧರಿಸಿದ ನಂತರ ಸಮಸ್ಯೆ ಕಾಣಿಸಿಕೊಂಡಿದೆ.</p>.<p>ವರದಿ ಸಲ್ಲಿಸಲು ಸೂಚನೆ: 3 ಗುಂಟೆ ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿ ಸುಶೀಲಾ ಜಿ. ಅವರು ತಹಶೀಲ್ದಾರ್ ಶಾಂತಗೌಡ ಬಿರಾದರ ಅವರಿಗೆ ಸೂಚಿಸಿದರು.</p>.<p>ಕೂಡಲೇ ವರದಿ ನೀಡಿದರೆ, ಸ್ಥಳದ ಕುರಿತಾಗಿ ಮುಂದಿನ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಹೇಳಿದರು.<br /> ಸಾಮರಸ್ಯಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead">ಶಾಂತಿ ಸಭೆ: ಜಿಲ್ಲಾಧಿಕಾರಿ ಸೂಚನೆಯಂತೆ ಮಂಗಳವಾರ ತಹಶೀಲ್ದಾರ್, ಡಿವೈಎಸ್ಪಿ, ತಾಪಂ ಇಒ, ಸಮಾಜ ಕಲ್ಯಾಣ ಇಲಾಖೆಯ ಎಡಿ, ಪಿಡಿಒ ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಅಧಿಕಾರಿಗಳು ಗ್ರಾಮದಲ್ಲಿ ಸಭೆ ನಡೆಸಿದರು.</p>.<p class="Subhead">ತಾರತಮ್ಯ ಮಾಡದಂತೆ ತಾಕೀತು: ಗ್ರಾಮದಲ್ಲಿನ ಕ್ಷೌರದಂಗಡಿ, ಹೋಟೆಲ್ ಸೇರಿದಂತೆ ಎಲ್ಲಾ ರೀತಿಯ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ತಾರತಮ್ಯ ಮಾಡದಂತೆ, ನಿಗದಿತ ದರದಂತೆ ಹಣ ನೀಡಿದರೆ ಅವರಿಗೆ ವಸ್ತುಗಳನ್ನು ಮಾರಾಟ ಮಾಡುವಂತೆ, ಸೇವೆ ನೀಡುವಂತೆ ಅಧಿಕಾರಿಗಳ ತಂಡ ತಿಳಿವಳಿಕೆ ಪತ್ರಗಳನ್ನು ನೀಡಿ, ತಾಕೀತು ಮಾಡಿತು.</p>.<p class="Subhead">ಷೋಕಾಸ್ ನೋಟಿಸ್: ಕ್ಷೌರದಂಗಡಿಯಲ್ಲಿ ಕ್ಷೌರ ಮಾಡಲು ಬಹಿಷ್ಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಅಂಗಡಿಗೆ ಕಾರಣ ಕೇಳಿ ನೋಟಿಸ್ ನೀಡಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>