<p><strong>ಸುರಪುರ</strong>: ಶಾರ್ಟ್ಸರ್ಕೀಟ್ನಿಂದ ಬೆಂಕಿ ಅವಘಡ ನಡೆದ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಬಿ. ಸುಶೀಲಾ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ ವಿಪರೀತ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹಲವು ಮನೆಗಳಲ್ಲಿ ಬೆಂಕಿ ಹತ್ತಿಕೊಂಡು ರೆಫ್ರಿಜರೇಟರ್, ಟಿವಿ, ಫ್ಯಾನ್, ಮನೆಯ ವೈರ್ಗಳು ಸುಟ್ಟು ಹೋಗಿದ್ದವು. ಭಯದ ವಾತಾವರಣ ನಿರ್ಮಾಣವಾಗಿತ್ತು. ಕೆಲವರಿಗೆ ಗಾಯಗಳಾಗಿದ್ದವು.</p>.<p>ಜಿಲ್ಲಾಧಿಕಾರಿ ಪ್ರತಿ ಮನೆಗೆ ಭೇಟಿ ನೀಡಿ, ಹಾನಿ ಬಗ್ಗೆ ನಿವಾಸಿಗಳಿಂದ ಮಾಹಿತಿ ಪಡೆದುಕೊಂಡರು. ಭಯ ಪಡುವುದು ಬೇಡ ನಿಮ್ಮ ಜೊತೆ ನಾವಿದ್ದೇವೆ ಎಂದು ಅಭಯ ನೀಡಿದರು.</p>.<p>‘ಕಂದಾಯ ಮತ್ತು ಜೆಸ್ಕಾಂ ಇಲಾಖೆಯವರು ಜಂಟಿ ಸಮೀಕ್ಷೆ ಮಾಡಿ ಹಾನಿಯಾದ ಬಗ್ಗೆ ವರದಿ ನೀಡಬೇಕು. ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಯತ್ನಿಸುತ್ತೇನೆ’ ಎಂದು ತಿಳಿಸಿದರು.</p>.<p>ಘಟನೆಯಲ್ಲಿ ಗಾಯಗೊಂಡ ಮತ್ತು ಭಯಭೀತರಾದವರಿಗೆ ಸೂಕ್ತ ಚಿಕಿತ್ಸೆ ನೀಡುವ ಜೊತೆಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ತಹಶೀಲ್ದಾರ್ ಎಚ್.ಎ. ಸರಕಾವಸ್, ತಾಪಂ ಇಒ ಬಸವರಾಜ ಸಜ್ಜನ್, ಪಿಐ ಆನಂದ ವಾಗ್ಮೋಡೆ, ಸಂತೋಷ ನಾಯಕ, ಕುರುಬ ಸಮಾಜದ ಅಧ್ಯಕ್ಷ ಕಾಳಪ್ಪ ಕವಾತಿ, ಜೆಸ್ಕಾಂ ಎಇಇ ರಫೀಕ್, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ಶಾರ್ಟ್ಸರ್ಕೀಟ್ನಿಂದ ಬೆಂಕಿ ಅವಘಡ ನಡೆದ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಬಿ. ಸುಶೀಲಾ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ ವಿಪರೀತ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹಲವು ಮನೆಗಳಲ್ಲಿ ಬೆಂಕಿ ಹತ್ತಿಕೊಂಡು ರೆಫ್ರಿಜರೇಟರ್, ಟಿವಿ, ಫ್ಯಾನ್, ಮನೆಯ ವೈರ್ಗಳು ಸುಟ್ಟು ಹೋಗಿದ್ದವು. ಭಯದ ವಾತಾವರಣ ನಿರ್ಮಾಣವಾಗಿತ್ತು. ಕೆಲವರಿಗೆ ಗಾಯಗಳಾಗಿದ್ದವು.</p>.<p>ಜಿಲ್ಲಾಧಿಕಾರಿ ಪ್ರತಿ ಮನೆಗೆ ಭೇಟಿ ನೀಡಿ, ಹಾನಿ ಬಗ್ಗೆ ನಿವಾಸಿಗಳಿಂದ ಮಾಹಿತಿ ಪಡೆದುಕೊಂಡರು. ಭಯ ಪಡುವುದು ಬೇಡ ನಿಮ್ಮ ಜೊತೆ ನಾವಿದ್ದೇವೆ ಎಂದು ಅಭಯ ನೀಡಿದರು.</p>.<p>‘ಕಂದಾಯ ಮತ್ತು ಜೆಸ್ಕಾಂ ಇಲಾಖೆಯವರು ಜಂಟಿ ಸಮೀಕ್ಷೆ ಮಾಡಿ ಹಾನಿಯಾದ ಬಗ್ಗೆ ವರದಿ ನೀಡಬೇಕು. ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಯತ್ನಿಸುತ್ತೇನೆ’ ಎಂದು ತಿಳಿಸಿದರು.</p>.<p>ಘಟನೆಯಲ್ಲಿ ಗಾಯಗೊಂಡ ಮತ್ತು ಭಯಭೀತರಾದವರಿಗೆ ಸೂಕ್ತ ಚಿಕಿತ್ಸೆ ನೀಡುವ ಜೊತೆಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ತಹಶೀಲ್ದಾರ್ ಎಚ್.ಎ. ಸರಕಾವಸ್, ತಾಪಂ ಇಒ ಬಸವರಾಜ ಸಜ್ಜನ್, ಪಿಐ ಆನಂದ ವಾಗ್ಮೋಡೆ, ಸಂತೋಷ ನಾಯಕ, ಕುರುಬ ಸಮಾಜದ ಅಧ್ಯಕ್ಷ ಕಾಳಪ್ಪ ಕವಾತಿ, ಜೆಸ್ಕಾಂ ಎಇಇ ರಫೀಕ್, ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>