ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜಿಲ್ಲೆಯಲ್ಲಿ ಯಾವುದೇ ಪಿಸಿಪಿಎನ್ಡಿಟಿ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿಲ್ಲ ಎಂದು ಸಭೆಗೆ ತಿಳಿಸಿದರು.
ಇ-ಆಸ್ಪತ್ರೆ ಮತ್ತು ಇ-ಸಂಜೀವಿನಿ ಕಾರ್ಯಕ್ರಮ ಪರಿಶೀಲಿಸಿ ಇನ್ನು ಹೆಚ್ಚಿನ ಪ್ರಗತಿ ಸಾಧಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಇ- ಸಂಜೀವಿನಿಯಲ್ಲಿ ಜಿಲ್ಲೆ ಎರಡನೇ ಸ್ಥಾನದಲ್ಲಿರುವಂತೆ ಕಾರ್ಯನಿರ್ವಹಿಸಿದ ಅಧಿಕಾರಿಗಳ ಕಾರ್ಯವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು.
ಉಪ ವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯಧಿಕಾರಿ ಡಾ. ಇಂದುಮತಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಭಗವಂತ ಅನ್ವಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿದ್ದರು.