ನಗರದ ಖಾಸಗಿ ಕಾಲೇಜು ಬಳಿ ಬೈಕ್, ಕಾರು ಹಿಂದೆ ತೆಗೆಯುವ ವಿಷಯವಾಗಿ ಜಗಳ ಆರಂಭವಾಗಿದೆ. ಅಲ್ಲಿಯೇ ಇಬ್ಬರು ಪರಸ್ಪರ ಮಾರಮಾರಿ ಮಾಡಿಕೊಂಡಿದ್ದಾರೆ. ನಂತರ ಗಾಯಗೊಂಡ ಶಂಕರರನ್ನು ಅವರ ಅಣ್ಣ ಯಲ್ಲಾಲಿಂಗ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಿಸಿದ್ದಾರೆ. ನಂತರ ಆಸ್ಪತ್ರೆಗೆ ಬಂದ ಎಲ್ಹೇರಿ ಗ್ರಾಮದ ಅಜಯ್ ರೆಡ್ಡಿ ಎನ್ನುವರ ಕಡೆಯವರಿಂದ ಹಲ್ಲೆ ಆಸ್ಪತ್ರೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ. ಪೊಲೀಸ್ ಪೇದೆ ಎದುರೇ ನಡೆದ ಗಲಾಟೆ ಜಿಲ್ಲಾ ಆಸ್ಪತ್ರೆಯಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಯುವಕರ ಗುಂಪು ಪೊಲೀಸ್ ಅಧಿಕಾರಿಯನ್ನೇ ಬೆದರಿಸಿ ಹಲ್ಲೆಗೆ ಮುಂದಾಗಿದ್ದಾರೆ. ಎರಡು ದಿನದ ಹಿಂದೆ ಹಳಿಗೇರಾ ಗ್ರಾಮಪಂಚಾಯಿತಿಅಧ್ಯಕ್ಷನಾಗನಗೌಡ ಸ್ವಂತ ತಂಗಿ, ತಂಗಿ ಗಂಡನ ಮೇಲೆ ಆಸ್ಪತ್ರೆಯಲ್ಲಿಯೇ ಹಲ್ಲೆ ನಡೆಸಿದ್ದರು.