ಜಿಲ್ಲೆಯಲ್ಲಿ ಕೃಷ್ಣೆ, ಭೀಮಾ ನದಿ ಹರಿಯುತ್ತಿದ್ದರೂ ನೀರಾವರಿ ಪ್ರದೇಶ ಹೆಚ್ಚಿಲ್ಲ. ಜಿಲ್ಲೆಯಿಂದ ವಿವಿಧ ಭಾಗಗಳಿಗೆ ಗುಳೆ ಹೋಗುವುದು ಸಾಮಾನ್ಯವಾಗಿದೆ. ಬಡತನ, ಅನಕ್ಷರತೆ, ಶೈಕ್ಷಣಿಕ ಬೆಳವಣಿಗೆಯಲ್ಲಿ ತೀರಾ ಹಿಂದುಳಿದಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿಯವರು ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ‘ಪ್ಯಾಕೇಜ್’ ಘೋಷಿಸುವ ನಿರೀಕ್ಷೆಯಲ್ಲಿ ಜಿಲ್ಲೆಯ ಜನರಿದ್ದಾರೆ.