ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಯ ಮಧ್ಯೆಯೂ ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಆಸ್ಪತ್ರೆಯಲ್ಲಿ ಸೌಲಭ್ಯ ಕಲ್ಪಿಸಲಾಗುತ್ತಿದೆಡಾ. ಪ್ರಭುಲಿಂಗ ಮಾನಕರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಇನ್ನಿತರ ಮಾಹಿತಿಯನ್ನು ವೈದ್ಯರು ನೀಡಬೇಕು. ವಸತಿ ಹಾಗೂ ಅಗತ್ಯ ಸೌಲಭ್ಯಗಳು ಇಲ್ಲ. ಒತ್ತಡದ ನಡುವೆ ಕೆಲಸ ನಿರ್ವಹಿಸಬೇಕುಡಾ. ರಮೇಶ ಗುತ್ತೆದಾರ ಟಿಎಚ್ಒ ಶಹಾಪುರ
ಯಾದಗಿರಿ ಜಿಲ್ಲೆಯಲ್ಲಿ ಎಂಬಿಬಿಎಸ್ ಪದವಿ ಪಡೆದ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನ ಓದಿಗಾಗಿ ಬೇರೆಡೆ ತೆರಳುವುದರಿಂದ ನಮ್ಮಲ್ಲಿ ವೈದ್ಯರ ಕೊರತೆ ಕಾಡುತ್ತಲಿದೆಡಾ. ಯಲ್ಲಪ್ಪ ಪಾಟೀಲ ಹುಲಕಲ್ ಸಾರ್ವಜನಿಕ ಆಡಳಿತ ವೈದ್ಯಾಧಿಕಾರಿ ಶಹಾಪುರ
ಕಳೆದ ಒಂದು ವರ್ಷದಿಂದ ತಡಿಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ವೈದ್ಯರು ಇಲ್ಲದಿರುವುದರಿಂದ ರೋಗಿಗಳಿಗೆ ಮಹಿಳೆಯರಿಗೆ ಸಾಕಷ್ಟು ಸಮಸ್ಯೆಯಾಗಿದೆ. ತುರ್ತು ಸಮಯದಲ್ಲಿ ರೋಗಿಗಳನ್ನು ಜಿಲ್ಲಾ ಕೇಂದ್ರಕ್ಕೆ ಕರೆದುಕೊಂಡು ಹೋಗುವುದು ಅನಿವಾರ್ಯವಾಗಿದೆರವಿಕುಮಾರ ದೇವರಮನಿ ಜಿಲ್ಲಾಧ್ಯಕ್ಷ ವಿಷ್ಣುಸೇನಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.