ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ: ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಅರ್ಧದಷ್ಟು ಹುದ್ದೆಗಳು ಖಾಲಿ

Published : 1 ಜುಲೈ 2024, 5:44 IST
Last Updated : 1 ಜುಲೈ 2024, 5:44 IST
ಫಾಲೋ ಮಾಡಿ
Comments
ಯಾದಗಿರಿ ನಗರ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ
ಯಾದಗಿರಿ ನಗರ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ
ವಡಗೇರಾ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ
ವಡಗೇರಾ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರ
ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಯ ಮಧ್ಯೆಯೂ ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಆಸ್ಪತ್ರೆಯಲ್ಲಿ ಸೌಲಭ್ಯ ಕಲ್ಪಿಸಲಾಗುತ್ತಿದೆ
ಡಾ. ಪ್ರಭುಲಿಂಗ ಮಾನಕರ್‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಇನ್ನಿತರ ಮಾಹಿತಿಯನ್ನು ವೈದ್ಯರು ನೀಡಬೇಕು. ವಸತಿ ಹಾಗೂ ಅಗತ್ಯ ಸೌಲಭ್ಯಗಳು ಇಲ್ಲ. ಒತ್ತಡದ ನಡುವೆ ಕೆಲಸ ನಿರ್ವಹಿಸಬೇಕು
ಡಾ. ರಮೇಶ ಗುತ್ತೆದಾರ ಟಿಎಚ್ಒ ಶಹಾಪುರ
ಯಾದಗಿರಿ ಜಿಲ್ಲೆಯಲ್ಲಿ ಎಂಬಿಬಿಎಸ್ ಪದವಿ ಪಡೆದ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನ ಓದಿಗಾಗಿ ಬೇರೆಡೆ ತೆರಳುವುದರಿಂದ ನಮ್ಮಲ್ಲಿ ವೈದ್ಯರ ಕೊರತೆ ಕಾಡುತ್ತಲಿದೆ
ಡಾ. ಯಲ್ಲಪ್ಪ ಪಾಟೀಲ ಹುಲಕಲ್‌ ಸಾರ್ವಜನಿಕ ಆಡಳಿತ ವೈದ್ಯಾಧಿಕಾರಿ ಶಹಾಪುರ
ಕಳೆದ ಒಂದು ವರ್ಷದಿಂದ ತಡಿಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ವೈದ್ಯರು ಇಲ್ಲದಿರುವುದರಿಂದ ರೋಗಿಗಳಿಗೆ ಮಹಿಳೆಯರಿಗೆ ಸಾಕಷ್ಟು ಸಮಸ್ಯೆಯಾಗಿದೆ. ತುರ್ತು ಸಮಯದಲ್ಲಿ ರೋಗಿಗಳನ್ನು ಜಿಲ್ಲಾ ಕೇಂದ್ರಕ್ಕೆ ಕರೆದುಕೊಂಡು ಹೋಗುವುದು ಅನಿವಾರ್ಯವಾಗಿದೆ
ರವಿಕುಮಾರ ದೇವರಮನಿ ಜಿಲ್ಲಾಧ್ಯಕ್ಷ ವಿಷ್ಣುಸೇನಾ
ತಜ್ಞ ವೈದ್ಯರ ಕೊರತೆ
ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಿದೆ. ಜಿಲ್ಲೆಯಾಗಿ 14 ವರ್ಷಗಳಾದರೂ ಮಂಜೂರಾದ ಹುದ್ದೆಗಳು ಇನ್ನೂ ಭರ್ತಿಯಾಗಿಲ್ಲ. ಇದರಿಂದ ಶಿಫಾರಸು ಮಾಡುವುದು ಸಾಮಾನ್ಯವಾಗಿದೆ. ಮುಖ್ಯವಾಗಿ ಅರವಳಿಕೆ ತಜ್ಞರು ಸ್ತ್ರೀರೋಗ ತಜ್ಞರು ಸ್ಥಾನಿಕ ವೈದ್ಯಾಧಿಕಾರಿ ಸಮುದಾಯ ಆರೋಗ್ಯಾಧಿಕಾರಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸಕರು ಕಿವಿ ಮತ್ತು ಗಂಟಲು ತಜ್ಞರು ಮೂಳೆ ತಜ್ಞರು ಮಕ್ಕಳ ವೈದ್ಯರು ದಂತ ತಜ್ಞರು ಸೇರಿದಂತೆ ಹಲವಾರು ಹುದ್ದೆಗಳು ಖಾಲಿ ಇವೆ.
‘ಡಯಾಲಿಸಿಸ್ ಕೇಂದ್ರ ಆರಂಭಿಸಲಿ’
ಹುಣಸಗಿ ವೇಗವಾಗಿ ಬೆಳೆಯುತ್ತಿರುವ ತಾಲ್ಲೂಕು ಕೇಂದ್ರವಾಗಿದ್ದರಿಂದಾಗಿ ಗುಣಮಟ್ಟದ ಮತ್ತು ಹೆಚ್ಚಿನ ವೈದ್ಯಕೀಯ ಸೇವೆ ನೀಡುವ ನಿಟ್ಟಿನಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಿಸುವ ಅಗತ್ಯವಿದೆ. ‘ಡಯಾಲಿಸಿಸ್‌ ಜೊತೆಗೆ ಎಕ್ಸ್‌ರೇ ಸ್ಕ್ಯಾನಿಂಗ್ ಸೇರಿದಂತೆ ಇತರ ವೈದ್ಯಕೀಯ ಸೇವೆ ಹಾಗೂ ಸೂಕ್ತ ಸಿಬ್ಬಂದಿ ನೇಮಿಸುವ ಮೂಲಕ ಆರೋಗ್ಯ ರಕ್ಷಣೆಗೆ ಮುಂದಾಗಲು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರ ಗಮನಕ್ಕೆ ತರಲಾಗುವುದು. ಈ ಕುರಿತು ಸರ್ಕಾರ ಮಟ್ಟದಲ್ಲಿ ಪ್ರಯತ್ನಿಸಲಾಗುವುದು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ದಂಡಿನ್ ಕೆಪಿಸಿಸಿ ಸದಸ್ಯ ಸಿದ್ದಣ್ಣ ಮಲಗಲದಿನ್ನಿ ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT