<p><strong>ಸೈದಾಪುರ: </strong>‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದಿಲ್ಲ. ಆತಂಕ ಪಡುವ ಅಗತ್ಯವಿಲ್ಲ’ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತ್ಯ ಪ್ರಸಾದ ತಿಳಿಸಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಮೂಲಕ ಎರಡನೇ ಹಂತದ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಕೊರೊನಾವನ್ನು ತಡೆಯಲು ಪ್ರತಿಯೊಬ್ಬರೂ ಜೀವವನ್ನು ಪಣಕ್ಕಿಟ್ಟು ಕಾರ್ಯನಿರ್ವಹಿಸಿದ್ದಾರೆ. ಸಾಕಷ್ಟು ಸಿಬ್ಬಂದಿ ಕುಟುಂಬದಿಂದ ದೂರವಿದ್ದು, ಜನಸಾಮಾನ್ಯರ ನೆರವಿಗಾಗಿ ಹಗಲಿರಳು ದುಡಿದಿದ್ದಾರೆ. ಹೀಗಾಗಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡುತ್ತಿರುವುದರಿಂದ ಸಂತಸವಾಗುತ್ತಿದೆ’ ಎಂದರು.</p>.<p>ಲಸಿಕೆ ಪಡೆದ ಇಲ್ಲಿನ ಪೊಲೀಸ್ ಠಾಣೆ ಪಿಎಸ್ಐ ಭೀಮರಾಯ ಬಂಕ್ಲಿ ಮಾತನಾಡಿ,‘ಪ್ರತಿಯೊಬ್ಬರೂ ಲಸಿಕೆ ತೆಗೆದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ’ ಎಂದರು.</p>.<p>ಪೊಲೀಸ್ ಸಿಬ್ಬಂದಿಗೆ ಲಸಿಕೆ ನೀಡಿ 30 ನಿಮಿಷಗಳ ಕಾಲ ನಿಗಾವಹಿಸಲಾಗಿತ್ತು. ಅಡ್ಡ ಪರಿಣಾಮಗಳು ಕಂಡುಬರಲಿಲ್ಲ ಎಂದು ಇಲ್ಲಿನ ಸಿಬ್ಬಂದಿ ತಿಳಿಸಿದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ, ಹಿರಿಯ ಆರೋಗ್ಯ ಸಹಾಯಕಿ ಯಶೋಧ, ಶಿಬಾ ಸುಹಾಸಿನಿ, ಕವಿತಾ, ನಾಗವೇಣಿ, ನಿಖಿತಾ, ಗೀತಾ, ಶಿವಕುಮಾರ, ದುರ್ಗಪ್ಪ, ಪ್ರಸಾದ್, ಪ್ರಶಾಂತ ಹಾಗೂ ವಜೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ: </strong>‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದಿಲ್ಲ. ಆತಂಕ ಪಡುವ ಅಗತ್ಯವಿಲ್ಲ’ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತ್ಯ ಪ್ರಸಾದ ತಿಳಿಸಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಮೂಲಕ ಎರಡನೇ ಹಂತದ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಕೊರೊನಾವನ್ನು ತಡೆಯಲು ಪ್ರತಿಯೊಬ್ಬರೂ ಜೀವವನ್ನು ಪಣಕ್ಕಿಟ್ಟು ಕಾರ್ಯನಿರ್ವಹಿಸಿದ್ದಾರೆ. ಸಾಕಷ್ಟು ಸಿಬ್ಬಂದಿ ಕುಟುಂಬದಿಂದ ದೂರವಿದ್ದು, ಜನಸಾಮಾನ್ಯರ ನೆರವಿಗಾಗಿ ಹಗಲಿರಳು ದುಡಿದಿದ್ದಾರೆ. ಹೀಗಾಗಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡುತ್ತಿರುವುದರಿಂದ ಸಂತಸವಾಗುತ್ತಿದೆ’ ಎಂದರು.</p>.<p>ಲಸಿಕೆ ಪಡೆದ ಇಲ್ಲಿನ ಪೊಲೀಸ್ ಠಾಣೆ ಪಿಎಸ್ಐ ಭೀಮರಾಯ ಬಂಕ್ಲಿ ಮಾತನಾಡಿ,‘ಪ್ರತಿಯೊಬ್ಬರೂ ಲಸಿಕೆ ತೆಗೆದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ’ ಎಂದರು.</p>.<p>ಪೊಲೀಸ್ ಸಿಬ್ಬಂದಿಗೆ ಲಸಿಕೆ ನೀಡಿ 30 ನಿಮಿಷಗಳ ಕಾಲ ನಿಗಾವಹಿಸಲಾಗಿತ್ತು. ಅಡ್ಡ ಪರಿಣಾಮಗಳು ಕಂಡುಬರಲಿಲ್ಲ ಎಂದು ಇಲ್ಲಿನ ಸಿಬ್ಬಂದಿ ತಿಳಿಸಿದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ, ಹಿರಿಯ ಆರೋಗ್ಯ ಸಹಾಯಕಿ ಯಶೋಧ, ಶಿಬಾ ಸುಹಾಸಿನಿ, ಕವಿತಾ, ನಾಗವೇಣಿ, ನಿಖಿತಾ, ಗೀತಾ, ಶಿವಕುಮಾರ, ದುರ್ಗಪ್ಪ, ಪ್ರಸಾದ್, ಪ್ರಶಾಂತ ಹಾಗೂ ವಜೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>