ಜಿಲ್ಲಾ ಘಟಕದ ಅಧ್ಯಕ್ಷೆ ವೀಣಾ ಮೋದಿ ಮಾತನಾಡಿ, ‘ಕೇಂದ್ರ ಸರ್ಕಾರ ಆತ್ಮನಿರ್ಭರ, ಕಿಸಾನ ಸಮ್ಮಾನ್, ಆರೋಗ್ಯ ಭಾಗ್ಯ, ಆಯುಷ್ಮಾನ್ ಭಾರತ, ಪೋಷಣ ಅಭಿಯಾನ, ಗರೀಬ್ ಕಲ್ಯಾಣ, ಪ್ರಧಾನ ಮಂತ್ರಿ ಆವಾಸ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ದಲಿತ, ಹಿಂದುಳಿದ ಮತ್ತು ಅಲ್ಪ ಸಂಖ್ಯಾತರು, ಕಾರ್ಮಿಕರು ಹಾಗೂ ಕೃಷಿಕರಿಗೆ ವಿಶೇಷ ಸೌಲಭ್ಯಗಳನ್ನು ನೀಡಿದೆ’ ಎಂದು ತಿಳಿಸಿದರು.