<p><strong>ಕೆಂಭಾವಿ: </strong>ಬೇಸಿಗೆ ಬಂದಾಗಲೆಲ್ಲ ಸಮೀಪದ ಯಕ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಗ್ರಾಮಕ್ಕೆ ಸರಬರಾಜು ಮಾಡುವ ಬಾವಿಯು ಬತ್ತಿ ಹೋಗಿರುವ ಕಾರಣ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ.</p>.<p>ಇದ್ದ ಒಂದು ಬಾವಿಯೂ ಬತ್ತಿ ಹೋಗುತ್ತಿದ್ದು ಶಾಶ್ವತ ಪರಿಹಾರವಿಲ್ಲದೆ ಜನರು ಪರದಾಡುವಂತಾಗಿದೆ. ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಈ ಗ್ರಾಮದಲ್ಲಿ ಮೂವರು ಸದಸ್ಯರಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ.</p>.<p>ಗ್ರಾಮದಲ್ಲಿ ಒಂದು ಸೇದು ಬಾವಿಯಿದ್ದು, ಅಲ್ಲಿನ ನೀರು ದಿನಬಳಕೆಗೆ ಮಾತ್ರ ಉಪಯೋಗವಿದೆ. ಕುಡಿಯಲು ಯೋಗ್ಯವಾಗಿಲ್ಲ ಎನ್ನುತ್ತಾರೆ ಮುಖಂಡ ಕಾಂತಪ್ಪ ಕುಂಬಾರ.</p>.<p>ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದ್ದು, ಸೇದುಬಾವಿಯ ನೀರೆ ಗತಿಯಾಗಿದೆ. ಕಳೆದ ಎರಡು ವರ್ಷದಿಂದ ಶುದ್ಧಕುಡಿಯುವ ನೀರಿನ ಘಟಕ ದುರಸ್ತಿ ಮಾಡದಿರುವುದರಿಂದ ಅನಿವಾರ್ಯವಾಗಿ ಗ್ರಾಮಸ್ಥರು ಬಾವಿ ನೀರು ಬಳಸುತ್ತಿದ್ದಾರೆ.</p>.<p>ಶುದ್ಧ ಕುಡಿಯುವ ನೀರಿನ ಘಟಕದ ಮೋಟಾರ್ ದುರಸ್ತಿ ಮಾಡದಿರುವುದರಿಂದ ಘಟಕ ಹಾಳು ಬಿದ್ದಿದೆ. ಅದನ್ನು ದುರಸ್ತಿ ಮಾಡಿದರೆ ಬೇಸಿಗೆಯಲ್ಲಿ ಒಳ್ಳೆಯ ನೀರು ಕುಡಿಯಬಹುದು. ಆದರೆ ಗ್ರಾಮ ಪಂಚಾಯತಿ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅನೇಕ ಬಾರಿ ದೂರುಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.</p>.<p>ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಮುಖಾಂತರ ಕೋಟಿ ಕೋಟಿ ಹಣ ಬಿಡುಗಡೆ ಮಾಡುತ್ತಿದ್ದು, ಹಣ ಸರಿಯಾಗಿ ಬಳಕೆಯಾಗದಿರುವುದೇ ಇಂದು ಗ್ರಾಮಗಳು ಈ ಮಟ್ಟಕ್ಕೆ ತಲುಪಿದೆ.</p>.<p>ಕ್ಷೇತ್ರದ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಬೇಕಾಗಿದೆ ಎಂದು ಗ್ರಾಮಸ್ಥರ ಒತ್ತಾಯವಾಗಿದೆ.</p>.<p>*ಯಕ್ತಾಪುರ ಗ್ರಾ.ಪಂ.ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಬಾವಿ ತೆರೆಸಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಯುಕ್ತಾಪುರ ನೀರಿನ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ</p>.<p><em>- ಶರಣಬಸಪ್ಪಗೌಡ ದರ್ಶನಾಪುರ, ಶಾಸಕ</em></p>.<p>*ಕಳೆದ ದಶಕಗಳಿಂದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ. ಈ ಹಿಂದೆ ಶಾಸಕರು ಬಾವಿಯನ್ನು ನಿರ್ಮಿಸಿದ್ದಾರೆ. ಆದರೆ ಅದು ಬೇಸಿಗೆಯಲ್ಲಿ ಬತ್ತಿ ಹೋಗುತ್ತದೆ. ಶಾಶ್ವತ ಪರಿಹಾರ ಕಲ್ಪಿಸಿ</p>.<p><em>-ಸಿದ್ದು ಎಂ.ಅಸ್ಕಿ, ಮುಖಂಡ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ: </strong>ಬೇಸಿಗೆ ಬಂದಾಗಲೆಲ್ಲ ಸಮೀಪದ ಯಕ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಗ್ರಾಮಕ್ಕೆ ಸರಬರಾಜು ಮಾಡುವ ಬಾವಿಯು ಬತ್ತಿ ಹೋಗಿರುವ ಕಾರಣ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ.</p>.<p>ಇದ್ದ ಒಂದು ಬಾವಿಯೂ ಬತ್ತಿ ಹೋಗುತ್ತಿದ್ದು ಶಾಶ್ವತ ಪರಿಹಾರವಿಲ್ಲದೆ ಜನರು ಪರದಾಡುವಂತಾಗಿದೆ. ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಈ ಗ್ರಾಮದಲ್ಲಿ ಮೂವರು ಸದಸ್ಯರಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ.</p>.<p>ಗ್ರಾಮದಲ್ಲಿ ಒಂದು ಸೇದು ಬಾವಿಯಿದ್ದು, ಅಲ್ಲಿನ ನೀರು ದಿನಬಳಕೆಗೆ ಮಾತ್ರ ಉಪಯೋಗವಿದೆ. ಕುಡಿಯಲು ಯೋಗ್ಯವಾಗಿಲ್ಲ ಎನ್ನುತ್ತಾರೆ ಮುಖಂಡ ಕಾಂತಪ್ಪ ಕುಂಬಾರ.</p>.<p>ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದ್ದು, ಸೇದುಬಾವಿಯ ನೀರೆ ಗತಿಯಾಗಿದೆ. ಕಳೆದ ಎರಡು ವರ್ಷದಿಂದ ಶುದ್ಧಕುಡಿಯುವ ನೀರಿನ ಘಟಕ ದುರಸ್ತಿ ಮಾಡದಿರುವುದರಿಂದ ಅನಿವಾರ್ಯವಾಗಿ ಗ್ರಾಮಸ್ಥರು ಬಾವಿ ನೀರು ಬಳಸುತ್ತಿದ್ದಾರೆ.</p>.<p>ಶುದ್ಧ ಕುಡಿಯುವ ನೀರಿನ ಘಟಕದ ಮೋಟಾರ್ ದುರಸ್ತಿ ಮಾಡದಿರುವುದರಿಂದ ಘಟಕ ಹಾಳು ಬಿದ್ದಿದೆ. ಅದನ್ನು ದುರಸ್ತಿ ಮಾಡಿದರೆ ಬೇಸಿಗೆಯಲ್ಲಿ ಒಳ್ಳೆಯ ನೀರು ಕುಡಿಯಬಹುದು. ಆದರೆ ಗ್ರಾಮ ಪಂಚಾಯತಿ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅನೇಕ ಬಾರಿ ದೂರುಗಳನ್ನು ನೀಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.</p>.<p>ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಮುಖಾಂತರ ಕೋಟಿ ಕೋಟಿ ಹಣ ಬಿಡುಗಡೆ ಮಾಡುತ್ತಿದ್ದು, ಹಣ ಸರಿಯಾಗಿ ಬಳಕೆಯಾಗದಿರುವುದೇ ಇಂದು ಗ್ರಾಮಗಳು ಈ ಮಟ್ಟಕ್ಕೆ ತಲುಪಿದೆ.</p>.<p>ಕ್ಷೇತ್ರದ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಬೇಕಾಗಿದೆ ಎಂದು ಗ್ರಾಮಸ್ಥರ ಒತ್ತಾಯವಾಗಿದೆ.</p>.<p>*ಯಕ್ತಾಪುರ ಗ್ರಾ.ಪಂ.ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಬಾವಿ ತೆರೆಸಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಯುಕ್ತಾಪುರ ನೀರಿನ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ</p>.<p><em>- ಶರಣಬಸಪ್ಪಗೌಡ ದರ್ಶನಾಪುರ, ಶಾಸಕ</em></p>.<p>*ಕಳೆದ ದಶಕಗಳಿಂದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ. ಈ ಹಿಂದೆ ಶಾಸಕರು ಬಾವಿಯನ್ನು ನಿರ್ಮಿಸಿದ್ದಾರೆ. ಆದರೆ ಅದು ಬೇಸಿಗೆಯಲ್ಲಿ ಬತ್ತಿ ಹೋಗುತ್ತದೆ. ಶಾಶ್ವತ ಪರಿಹಾರ ಕಲ್ಪಿಸಿ</p>.<p><em>-ಸಿದ್ದು ಎಂ.ಅಸ್ಕಿ, ಮುಖಂಡ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>