<p><strong>ವಡಗೇರಾ:</strong> ‘ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಹಾಯಕ ಆಯುಕ್ತ (ವಿಭಾಗೀಯ ಆಯುಕ್ತ) ಹಾಗೂ ತಾಲ್ಲೂಕ ಪಂಚಾಯಿತಿಯ ಆಡಳಿತಾಧಿಕಾರಿ ಶ್ರೀಧರ ಹೇಳಿದರು</p>.<p>ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ನಿಗದಿ ಪಡಿಸಿದ ಗುರಿಯನ್ನು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಮರ್ಪಣಾಭಾವನೆಯಿಂದ ಕಾರ್ಯವನ್ನು ನಿರ್ವಹಿಸಿಬೇಕು. ಹಾಗೆಯೆ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಯಾವುದೆ ಕಾರಣಕ್ಕೂ ಅಧಿಕಾರಿಗಳ ಉದಾಸಿನತೆಯನ್ನು ಸಹಿಸುವುದಿಲ್ಲ’ ಎಂದು ಸೂಚಿಸಿದರು</p>.<p>‘ಈಗಾಗಲೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ವಿವಿಧ ಯೋಜನೆ ಅಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಗುಣ ಮಟ್ಟದಿಂದ ಕೂಡಿರಬೇಕು. ನಿಗದಿ ಪಡಿಸಿದ ಕಾಲಮಿತಿಯ ಒಳಗಡೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಳಪೆ ಮಟ್ಟದ ಕಾಮಗಾರಿ ಕಂಡು ಬಂದರೆ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಪಂಚಾಯಿತಿಯ ಪಿಡಿಒ ಗಳು ತಮ್ಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಕಡ್ಡಾಯವಾಗಿ ಫಾಗಿಂಗ್ ಮಾಡಿಸಲು ಕ್ರಮಗಳನ್ನು ಕೈಗೊಳ್ಳಬೇಕು ಇದರ ಜತೆಗೆ ಗ್ರಾಮಗಳಲ್ಲಿ ನೈರ್ಮಲ್ಯವನ್ನು ಕಾಪಾಡಬೇಕು ಸ್ವಚ್ಛತಾ ವಾಹನಗಳನ್ನು ಪ್ರತಿದಿನ ಉಪಯೋಗಿಸಿ ಕಸ ಸಂಗ್ರಹ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.</p>.<p>‘ಪಂಚಾಯಿತಿಯ ಎಲ್ಲಾ ಸಿಬ್ಬಂದಿ ಒಗ್ಗಟ್ಟಿನಿಂದ ಮನೆ ಮನೆಗೆ ಹಾಗೂ ಅಂಗಡಿಗಳಿಗೆ ತೆರಳಿ ಪ್ರತಿ ಗುರುವಾರ ತೆರಿಗೆಯನ್ನು ಸಂಗ್ರಹಿಸಿಬೇಕು’ ಎಂದರು.</p>.<p>ತಾಪಂ ಕಾರ್ಯನಿರ್ವಾಹ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಗಲಾ ಎಂ, ಸಿಡಿಪಿಒ ಮಲ್ಲಣ್ಣ ದೇಸಾಯಿ, ಎಇಇ ಮಂಜುನಾಥ, ಶಂಕರ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಹಾಯಕ ಆಯುಕ್ತ (ವಿಭಾಗೀಯ ಆಯುಕ್ತ) ಹಾಗೂ ತಾಲ್ಲೂಕ ಪಂಚಾಯಿತಿಯ ಆಡಳಿತಾಧಿಕಾರಿ ಶ್ರೀಧರ ಹೇಳಿದರು</p>.<p>ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸರ್ಕಾರ ನಿಗದಿ ಪಡಿಸಿದ ಗುರಿಯನ್ನು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಮರ್ಪಣಾಭಾವನೆಯಿಂದ ಕಾರ್ಯವನ್ನು ನಿರ್ವಹಿಸಿಬೇಕು. ಹಾಗೆಯೆ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಯಾವುದೆ ಕಾರಣಕ್ಕೂ ಅಧಿಕಾರಿಗಳ ಉದಾಸಿನತೆಯನ್ನು ಸಹಿಸುವುದಿಲ್ಲ’ ಎಂದು ಸೂಚಿಸಿದರು</p>.<p>‘ಈಗಾಗಲೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ವಿವಿಧ ಯೋಜನೆ ಅಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಗುಣ ಮಟ್ಟದಿಂದ ಕೂಡಿರಬೇಕು. ನಿಗದಿ ಪಡಿಸಿದ ಕಾಲಮಿತಿಯ ಒಳಗಡೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಳಪೆ ಮಟ್ಟದ ಕಾಮಗಾರಿ ಕಂಡು ಬಂದರೆ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಪಂಚಾಯಿತಿಯ ಪಿಡಿಒ ಗಳು ತಮ್ಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಹಾಗೂ ಬಡಾವಣೆಗಳಲ್ಲಿ ಕಡ್ಡಾಯವಾಗಿ ಫಾಗಿಂಗ್ ಮಾಡಿಸಲು ಕ್ರಮಗಳನ್ನು ಕೈಗೊಳ್ಳಬೇಕು ಇದರ ಜತೆಗೆ ಗ್ರಾಮಗಳಲ್ಲಿ ನೈರ್ಮಲ್ಯವನ್ನು ಕಾಪಾಡಬೇಕು ಸ್ವಚ್ಛತಾ ವಾಹನಗಳನ್ನು ಪ್ರತಿದಿನ ಉಪಯೋಗಿಸಿ ಕಸ ಸಂಗ್ರಹ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.</p>.<p>‘ಪಂಚಾಯಿತಿಯ ಎಲ್ಲಾ ಸಿಬ್ಬಂದಿ ಒಗ್ಗಟ್ಟಿನಿಂದ ಮನೆ ಮನೆಗೆ ಹಾಗೂ ಅಂಗಡಿಗಳಿಗೆ ತೆರಳಿ ಪ್ರತಿ ಗುರುವಾರ ತೆರಿಗೆಯನ್ನು ಸಂಗ್ರಹಿಸಿಬೇಕು’ ಎಂದರು.</p>.<p>ತಾಪಂ ಕಾರ್ಯನಿರ್ವಾಹ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಗಲಾ ಎಂ, ಸಿಡಿಪಿಒ ಮಲ್ಲಣ್ಣ ದೇಸಾಯಿ, ಎಇಇ ಮಂಜುನಾಥ, ಶಂಕರ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>