'ಮಕ್ಕಳು, ಮಹಿಳೆಯರು, ವೃದ್ದರು ನೀರು ತರಲು ತುಂಬಾ ಕಷ್ಟ ಪಡುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಮೋಟಾರ್ ದುರಸ್ತಿ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಶೀಘ್ರದಲ್ಲೇ ಗ್ರಾಮಸ್ಥರಿಂದ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಖಾಲಿ ನೀರಿನ ಬಿಂದಿಗೆ ಹಿಡಿದು ಪ್ರತಿಭಟಿಸಲಾಗುವುದೆಂದು' ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ನಿಂಗಣ್ಣ ಕರಡಿ ಆಗ್ರಹಿಸಿದ್ದಾರೆ.