ಯಾದಗಿರಿ: ಜಿಲ್ಲೆಯ ಸುರಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ನೇತೃತ್ವದಲ್ಲಿ ಸುರಪುರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸುರಪುರ ಘಟಕದ ಚಾಲಕ ಕಂ ನಿರ್ವಾಹಕ ಸೂರ್ಯಪ್ರಕಾಶ ಭಾಗಿಯಾಗಿದ್ದರಿಂದ ವಿಭಾಗೀಯ ನಿಯಂತ್ರಣಾಧಿಕಾರಿ ಸುನಿಲ್ ಕುಮಾರ ಚಂದರಗಿ ಅಮಾನತು ಮಾಡಿ ಆದೇಶಿಸಿದ್ದಾರೆ.
ಸೂರ್ಯಪ್ರಕಾಶ ಬಿಜೆಪಿ ಪಕ್ಷದ ಚಿಹ್ನೆಯುಳ್ಳ ಶಾಲು ಧರಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಭಾಗಿಯಾಗಿರುವ ಬಗ್ಗೆ ನಿಗಮದ ವಿಭಾಗದ ಆಂತರಿಕ ವಿಚಾರಣೆಯಲ್ಲಿ ದೃಢಪಟ್ಟಿರುವುದರಿಂದ ಪ್ರಾಥಮಿಕ ವರದಿಯನ್ನು ಪಡೆದುಕೊಂಡು ನಿಯಂತ್ರಣಾಧಿಕಾರಿ ಅಮಾನತುಗೊಳಿಸಿದ್ದಾರೆ.