ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ| ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಚಾಲಕ ಕಂ ನಿರ್ವಾಹಕ ಭಾಗಿ: ಅಮಾನತು

Published 26 ಏಪ್ರಿಲ್ 2023, 15:45 IST
Last Updated 26 ಏಪ್ರಿಲ್ 2023, 15:45 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಸುರಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ನೇತೃತ್ವದಲ್ಲಿ ಸುರಪುರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸುರಪುರ ಘಟಕದ ಚಾಲಕ ಕಂ ನಿರ್ವಾಹಕ ಸೂರ್ಯಪ್ರಕಾಶ ಭಾಗಿಯಾಗಿದ್ದರಿಂದ ವಿಭಾಗೀಯ ನಿಯಂತ್ರಣಾಧಿಕಾರಿ ಸುನಿಲ್‌ ಕುಮಾರ ಚಂದರಗಿ ಅಮಾನತು ಮಾಡಿ ಆದೇಶಿಸಿದ್ದಾರೆ.

ಸೂರ್ಯಪ್ರಕಾಶ ಬಿಜೆಪಿ ಪಕ್ಷದ ಚಿಹ್ನೆಯುಳ್ಳ ಶಾಲು ಧರಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಭಾಗಿಯಾಗಿರುವ ಬಗ್ಗೆ ನಿಗಮದ ವಿಭಾಗದ ಆಂತರಿಕ ವಿಚಾರಣೆಯಲ್ಲಿ ದೃಢಪಟ್ಟಿರುವುದರಿಂದ ಪ್ರಾಥಮಿಕ ವರದಿಯನ್ನು ಪಡೆದುಕೊಂಡು ನಿಯಂತ್ರಣಾಧಿಕಾರಿ ಅಮಾನತುಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT