<p><strong>ಕೆಂಭಾವಿ:</strong>ಮಕ್ಕಳ ಕಲಿಕಾ ಅಭಿವೃದ್ಧಿಗೆ ಶೈಕ್ಷಣಿಕ ಮೇಳಗಳು ಸಹಕಾರಿಯಾಗಿವೆ ಎಂದು ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಂಬಣ್ಣ ತಳವಾರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮಜಿ ಫೌಂಡೇಶನ್ ವತಿಯಿಂದ ಗುರುವಾರ<br />ಹಮ್ಮಿಕೊಂಡಿದ್ದ ಭಾಷಾ ಮತ್ತು ಗಣಿತ ಮೇಳದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೇಳಗಳಿಂದ ಮಕ್ಕಳಲ್ಲಿ<br />ಗುಣಾತ್ಮಕ ಕಲಿಕೆ ಉಂಟಾಗಲು ಸಾಧ್ಯ. ಇಂತಹ ಶೈಕ್ಷಣಿಕ ಮೇಳಗಳಿಂದ ಮಕ್ಕಳಲ್ಲಿ ಯೋಚಿಸುವ, ಪ್ರಶ್ನಿಸುವ ಸಾಮರ್ಥ್ಯಕ್ಕೆ ಸಹಕಾರಿ ಎಂದರು.</p>.<p>ಭಾಷೆ ಮತ್ತು ಗಣಿತ ವಿಷಯದ ಚಟುವಟಿಕೆಗಳಾದ ಸನ್ನಿವೇಶ ನೋಡಿ ವಿವರಿಸುವದು. ಚಿತ್ರನೋಡಿ ಕಥೆ ರಚಿಸುವದು, ಸ್ವಂತ ವಾಕ್ಯ ಬಳಸಿ, ಗಾದೆ ಮಾತುಗಳು, ಪದ ರಚನೆ, ಕಥೆಗೆ ಶೀರ್ಷಿಕೆ ಬರೆಯುವದು, ಗಣಿತದ ಮೂಲಕ್ರಿಯೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಮಕ್ಕಳು ವಿವರಿಸಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಪವನ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಸಿಆರ್ಪಿ ಮಲ್ಲಣ್ಣ ಸುರಪುರ, ಶ್ರೀಶೈಲ್ ಪಾಸೋಡಿ, ಶಿಕ್ಷಕರಾದ ಮಾಬು ಪಟೇಲ್, ಸಿದ್ರಾಮಪ್ಪ, ಜಯಶ್ರೀ ಹಿರೇಮಠ, ವಿಠಲ ನಾಯಕ, ಜಯಂತಿ ಎಚ್, ವೆಂಕಟೇಶ, ಶ್ರೀಶೈಲ್, ರಾಜ ಅಹ್ಮದ್, ಬಾಬುಲಾಲ್, ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong>ಮಕ್ಕಳ ಕಲಿಕಾ ಅಭಿವೃದ್ಧಿಗೆ ಶೈಕ್ಷಣಿಕ ಮೇಳಗಳು ಸಹಕಾರಿಯಾಗಿವೆ ಎಂದು ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಂಬಣ್ಣ ತಳವಾರ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮಜಿ ಫೌಂಡೇಶನ್ ವತಿಯಿಂದ ಗುರುವಾರ<br />ಹಮ್ಮಿಕೊಂಡಿದ್ದ ಭಾಷಾ ಮತ್ತು ಗಣಿತ ಮೇಳದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೇಳಗಳಿಂದ ಮಕ್ಕಳಲ್ಲಿ<br />ಗುಣಾತ್ಮಕ ಕಲಿಕೆ ಉಂಟಾಗಲು ಸಾಧ್ಯ. ಇಂತಹ ಶೈಕ್ಷಣಿಕ ಮೇಳಗಳಿಂದ ಮಕ್ಕಳಲ್ಲಿ ಯೋಚಿಸುವ, ಪ್ರಶ್ನಿಸುವ ಸಾಮರ್ಥ್ಯಕ್ಕೆ ಸಹಕಾರಿ ಎಂದರು.</p>.<p>ಭಾಷೆ ಮತ್ತು ಗಣಿತ ವಿಷಯದ ಚಟುವಟಿಕೆಗಳಾದ ಸನ್ನಿವೇಶ ನೋಡಿ ವಿವರಿಸುವದು. ಚಿತ್ರನೋಡಿ ಕಥೆ ರಚಿಸುವದು, ಸ್ವಂತ ವಾಕ್ಯ ಬಳಸಿ, ಗಾದೆ ಮಾತುಗಳು, ಪದ ರಚನೆ, ಕಥೆಗೆ ಶೀರ್ಷಿಕೆ ಬರೆಯುವದು, ಗಣಿತದ ಮೂಲಕ್ರಿಯೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಮಕ್ಕಳು ವಿವರಿಸಿದರು.</p>.<p>ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಪವನ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಸಿಆರ್ಪಿ ಮಲ್ಲಣ್ಣ ಸುರಪುರ, ಶ್ರೀಶೈಲ್ ಪಾಸೋಡಿ, ಶಿಕ್ಷಕರಾದ ಮಾಬು ಪಟೇಲ್, ಸಿದ್ರಾಮಪ್ಪ, ಜಯಶ್ರೀ ಹಿರೇಮಠ, ವಿಠಲ ನಾಯಕ, ಜಯಂತಿ ಎಚ್, ವೆಂಕಟೇಶ, ಶ್ರೀಶೈಲ್, ರಾಜ ಅಹ್ಮದ್, ಬಾಬುಲಾಲ್, ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>