ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂಚನಸೂರಗೆ ಆಹ್ವಾನ ನೀಡದ ಹಿನ್ನೆಲೆ: ಪ್ರತಿಭಟನೆ ಬಳಿಕ ಶಾಲೆ ಉದ್ಘಾಟನೆ ರದ್ದು

Last Updated 9 ಅಕ್ಟೋಬರ್ 2021, 9:27 IST
ಅಕ್ಷರ ಗಾತ್ರ

ಯಾದಗಿರಿ: ತಾಲ್ಲೂಕಿನ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಉದ್ಘಾಟನೆ ಸಮಾರಂಭಕ್ಕಾಗಿ ಶನಿವಾರ ಬೆಳಿಗ್ಗೆಯಿಂದ ವಿದ್ಯಾರ್ಥಿಗಳು ಕಾದು ಕುಳಿತಿದ್ದರು.

ಹೂವು, ಆರತಿ, ಕಳಸ ಇಟ್ಟುಕೊಂಡು ವಿದ್ಯಾರ್ಥಿಗಳು ಸಚಿವರಿಗಾಗಿ ಕಾದು ಕುಳಿತ್ತಿದ್ದರು.

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಇಂದು ಬೆಳಿಗ್ಗೆ 10ಗಂಟೆ ಕಟ್ಟಡ ಉದ್ಘಾಟನೆ ಮಾಡಬೇಕಿತ್ತು. ಆದರೆ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಆಹ್ವಾನ ನೀಡದಕ್ಕೆ ಕಾರ್ಯಕ್ರಮ ರದ್ದುಗೊಳಿಸುವಂತೆ ಆಗ್ರಹಿಸಿದ್ದರು.

ಶ್ರೀರಾಮುಲು ಅಭಿಮಾನಿಗಳಿಂದ ಪ್ರತಿಭಟನೆ:ಏಕಲವ್ಯ ಶಾಲೆ ಉದ್ಘಾಟನಾ ಕಾರ್ಯಕ್ರಮ ರದ್ದುಗೊಳಿಸಿದ್ದಕ್ಕೆ ಸಚಿವ ಶ್ರೀರಾಮಲು ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರ ಕಾರಿಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಶಾಲೆ ಉದ್ಘಟನೆ ಕಾರ್ಯಕ್ರಮವನ್ನೇ ರದ್ದುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT