ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳದಿಂದ ಅಮರೇಶ್‌ಗೆ ಬಿಜೆಪಿ ಬಿ.ಫಾರಂ

Last Updated 23 ಏಪ್ರಿಲ್ 2018, 10:53 IST
ಅಕ್ಷರ ಗಾತ್ರ

ಕೊಪ್ಪಳ: ಇಲ್ಲಿನ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಸಂಗಣ್ಣ ಕರಡಿ ಅವರಪುತ್ರ ಅಮರೇಶ್ ಕರಡಿ ಸ್ಪರ್ಧಿಸಲು ಬಿ. ಫಾರಂ ದೊರೆತಿದೆ.

ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರಗೌಡ ಪಾಟೀಲ್ ಹಲಗೇರಿ ಈ ವಿಷಯ ದೃಢಪಡಿಸಿದರು.

ಇದಕ್ಕೂ ಮುನ್ನ ಬಿಜೆಪಿಯ ಘೋಷಿತ ಅಭ್ಯರ್ಥಿ ಸಿ‌.ವಿ.ಚಂದ್ರಶೇಖರ ಸೋಮವಾರ ನಾಮಪತ್ರ ಸಲ್ಲಿಸಿದರು. ಈಗ ಅವರು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದು ಅನಿವಾರ್ಯವಾಗಿದೆ. ನಾಳೆ ಅಮರೇಶ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಾಟೀಲ್ ಹೇಳಿದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಸಾವಿರಾರು ಬೆಂಬಲಿಗರ ಜತೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT