<p><strong>ಯಾದಗಿರಿ:</strong> ಸೈದಾಪುರ ಸಮೀಪದ ದುಪ್ಪಲ್ಲಿ ಗ್ರಾಮದ ವ್ಯಾಪ್ತಿಯಲ್ಲಿ ಕಳ್ಳರು ವಿದ್ಯುತ್ ತಂತಿ ಹಾಗೂ ವಿದ್ಯುತ್ ಪರಿವರ್ತಕ (ಟಿ.ಸಿ) ಕದ್ದೊಯ್ದಿದ್ದಾರೆ.</p>.<p>ಜೆಸ್ಕಾಂ ಸೈದಾಪುರ ಶಾಖೆಯ ಶಾಖಾಧಿಕಾರಿ ಮಲ್ಲಪ್ಪ ಅವರು ನೀಡಿದ ದೂರಿನ ಅನ್ವಯ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದುಪ್ಪಲ್ಲಿ ಗ್ರಾಮದ ಮಹಿಪಾಲರೆಡ್ಡಿ ಗೌಡ ದುಪ್ಪಲ್ಲಿ ಅವರ ಜಮೀನಿನ ಪಂಪ್ಸೆಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಮಾರ್ಗದ 12 ಕಂಬಗಳಿಗೆ ಇದ್ದ ₹ 80 ಸಾವಿರ ಮೌಲ್ಯದ 2 ಎಸಿಎಸ್ಆರ್ ಎಲ್.ಟಿ ತಂತಿ ಹಾಗೂ ₹ 30 ಸಾವಿರ ಮೌಲ್ಯದ 25 ಕೆ.ವಿ ಸಾಮರ್ಥ್ಯದ ಟಿ.ಸಿ ಕಳ್ಳತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಚಿನ್ನಾಭರಣ ಕಳವು</p>.<p>ಯಾದಗಿರಿ ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದ ನಿವಾಸಿಯೊಬ್ಬರ ಮನೆ ಬಾಗಿಲಿನ ಕೀಲಿಯ ಕೊಂಡಿ ಮುರಿದ ಕಳ್ಳರು ನಗದು ಮತ್ತು ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ.</p>.<p>ಸಾಬಮ್ಮ ಅವರ ಮನೆಯಲ್ಲಿ ಕಳ್ಳತನವಾಗಿದೆ. ಸಾಬಮ್ಮ ಅವರ ಸಂಬಂಧಿಕರೊಬ್ಬರು ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ತೆರಳಿದ್ದರು. ವಾಪಸ್ ಬಂದು ನೋಡಿದ್ದಾಗ ಬಾಗಿಲಿನ ಕೀಲಿಯ ಕೊಂಡಿ ಮುರಿದಿತ್ತು. ಅಲ್ಮೇರಾದಲ್ಲಿ ಇರಿಸಿದ್ದ ₹ 25 ಸಾವಿರ ನಗದು ಸೇರಿ ₹ 1.41 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಸೈದಾಪುರ ಸಮೀಪದ ದುಪ್ಪಲ್ಲಿ ಗ್ರಾಮದ ವ್ಯಾಪ್ತಿಯಲ್ಲಿ ಕಳ್ಳರು ವಿದ್ಯುತ್ ತಂತಿ ಹಾಗೂ ವಿದ್ಯುತ್ ಪರಿವರ್ತಕ (ಟಿ.ಸಿ) ಕದ್ದೊಯ್ದಿದ್ದಾರೆ.</p>.<p>ಜೆಸ್ಕಾಂ ಸೈದಾಪುರ ಶಾಖೆಯ ಶಾಖಾಧಿಕಾರಿ ಮಲ್ಲಪ್ಪ ಅವರು ನೀಡಿದ ದೂರಿನ ಅನ್ವಯ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದುಪ್ಪಲ್ಲಿ ಗ್ರಾಮದ ಮಹಿಪಾಲರೆಡ್ಡಿ ಗೌಡ ದುಪ್ಪಲ್ಲಿ ಅವರ ಜಮೀನಿನ ಪಂಪ್ಸೆಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಮಾರ್ಗದ 12 ಕಂಬಗಳಿಗೆ ಇದ್ದ ₹ 80 ಸಾವಿರ ಮೌಲ್ಯದ 2 ಎಸಿಎಸ್ಆರ್ ಎಲ್.ಟಿ ತಂತಿ ಹಾಗೂ ₹ 30 ಸಾವಿರ ಮೌಲ್ಯದ 25 ಕೆ.ವಿ ಸಾಮರ್ಥ್ಯದ ಟಿ.ಸಿ ಕಳ್ಳತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಚಿನ್ನಾಭರಣ ಕಳವು</p>.<p>ಯಾದಗಿರಿ ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದ ನಿವಾಸಿಯೊಬ್ಬರ ಮನೆ ಬಾಗಿಲಿನ ಕೀಲಿಯ ಕೊಂಡಿ ಮುರಿದ ಕಳ್ಳರು ನಗದು ಮತ್ತು ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ.</p>.<p>ಸಾಬಮ್ಮ ಅವರ ಮನೆಯಲ್ಲಿ ಕಳ್ಳತನವಾಗಿದೆ. ಸಾಬಮ್ಮ ಅವರ ಸಂಬಂಧಿಕರೊಬ್ಬರು ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ತೆರಳಿದ್ದರು. ವಾಪಸ್ ಬಂದು ನೋಡಿದ್ದಾಗ ಬಾಗಿಲಿನ ಕೀಲಿಯ ಕೊಂಡಿ ಮುರಿದಿತ್ತು. ಅಲ್ಮೇರಾದಲ್ಲಿ ಇರಿಸಿದ್ದ ₹ 25 ಸಾವಿರ ನಗದು ಸೇರಿ ₹ 1.41 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>