<p><strong>ಸುರಪುರ</strong>: ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಭಾರಿ ಗಾಳಿ ಬೀಸಿದ್ದರಿಂದ ವಿದ್ಯುತ್ ಅವಘಡ ಸಂಭವಿಸಿದ್ದು, ಭಯಾನಕ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.</p><p>ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಹಳೆಯ ಟಿಸಿ ಇದೆ. ಈ ಟಿಸಿಗೆ ಅರ್ಧ ಗ್ರಾಮದಷ್ಟು ಮನೆಗಳು ವಿದ್ಯುತ್ ಸಂಪರ್ಕ ಹೊಂದಿವೆ.</p><p>ಟಿಸಿಯಿಂದ ಕಂಬಕ್ಕೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳು ಜೋತು ಬಿದ್ದು ವರ್ಷಗಳ ಗತಿಸಿವೆ. ತಂತಿ ಬದಲಿಸಲು ಗ್ರಾಮಸ್ಥರು ಮಾಡಿದ ಮನವಿಗಳಿಗೆ ಸ್ಪಂದನೆ ಸಿಕ್ಕಿರಲಿಲ್ಲ.</p><p>ಈ ತಂತಿಗಳು ಗಾಳಿಯಿಂದ ಒಂದಕ್ಕೊಂದು ಜೋಡಣೆಯಾಗಿ ಶಾಕ್ ಸರ್ಕ್ಯೂಟ್ ಸಂಭವಿಸಿದೆ. ಈ ಅವಘಡ ಸಂಪರ್ಕ ಹೊಂದಿದ ಎಲ್ಲ ಮನೆಗಳ ಕಂಬಗಳ ಹತ್ತಿರ ಹರಡಿದೆ. ಬೆಂಕಿ ಎಲ್ಲೆಡೆ ಕಾಣಿಸಿಕೊಂಡು ಸ್ಪಾರ್ಕ್ ಆಗುವ ದೃಶ್ಯ ಭಯದ ವಾತಾವರಣ ಸೃಷ್ಟಿ ಮಾಡಿತ್ತು.</p><p>ಹಲವು ತಂತಿಗಳು ನೆಲಕ್ಕೆ ಉರುಳಿ ಬಿದ್ದಿವೆ. ಕೆಲವರು ಹೆದರಿ ಮನೆಯಿಂದ ಹೊರಗೆ ಬಂದಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.</p><p>ನೂರಾರು ಮನೆಗಳ ಟಿ.ವಿ, ಫ್ಯಾನ್, ಏರಕೂಲರ್, ರೆಫ್ರಿಜೆಟರ್, ಬ್ಯಾಟರಿ ಸುಟ್ಟು ಹೋಗಿವೆ. ಒಂದು ಕೋಟಿಗೂ ಹೆಚ್ಚು ಹಾನಿಯನ್ನು ಗ್ರಾಮಸ್ಥರು ಅಂದಾಜಿಸಿದ್ದಾರೆ. ವಿಷಯ ತಿಳಿದ ತಕ್ಷಣ ಜೆಸ್ಕಾಂ ಇಲಾಖೆಯವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಭಾರಿ ಗಾಳಿ ಬೀಸಿದ್ದರಿಂದ ವಿದ್ಯುತ್ ಅವಘಡ ಸಂಭವಿಸಿದ್ದು, ಭಯಾನಕ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.</p><p>ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಹಳೆಯ ಟಿಸಿ ಇದೆ. ಈ ಟಿಸಿಗೆ ಅರ್ಧ ಗ್ರಾಮದಷ್ಟು ಮನೆಗಳು ವಿದ್ಯುತ್ ಸಂಪರ್ಕ ಹೊಂದಿವೆ.</p><p>ಟಿಸಿಯಿಂದ ಕಂಬಕ್ಕೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳು ಜೋತು ಬಿದ್ದು ವರ್ಷಗಳ ಗತಿಸಿವೆ. ತಂತಿ ಬದಲಿಸಲು ಗ್ರಾಮಸ್ಥರು ಮಾಡಿದ ಮನವಿಗಳಿಗೆ ಸ್ಪಂದನೆ ಸಿಕ್ಕಿರಲಿಲ್ಲ.</p><p>ಈ ತಂತಿಗಳು ಗಾಳಿಯಿಂದ ಒಂದಕ್ಕೊಂದು ಜೋಡಣೆಯಾಗಿ ಶಾಕ್ ಸರ್ಕ್ಯೂಟ್ ಸಂಭವಿಸಿದೆ. ಈ ಅವಘಡ ಸಂಪರ್ಕ ಹೊಂದಿದ ಎಲ್ಲ ಮನೆಗಳ ಕಂಬಗಳ ಹತ್ತಿರ ಹರಡಿದೆ. ಬೆಂಕಿ ಎಲ್ಲೆಡೆ ಕಾಣಿಸಿಕೊಂಡು ಸ್ಪಾರ್ಕ್ ಆಗುವ ದೃಶ್ಯ ಭಯದ ವಾತಾವರಣ ಸೃಷ್ಟಿ ಮಾಡಿತ್ತು.</p><p>ಹಲವು ತಂತಿಗಳು ನೆಲಕ್ಕೆ ಉರುಳಿ ಬಿದ್ದಿವೆ. ಕೆಲವರು ಹೆದರಿ ಮನೆಯಿಂದ ಹೊರಗೆ ಬಂದಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.</p><p>ನೂರಾರು ಮನೆಗಳ ಟಿ.ವಿ, ಫ್ಯಾನ್, ಏರಕೂಲರ್, ರೆಫ್ರಿಜೆಟರ್, ಬ್ಯಾಟರಿ ಸುಟ್ಟು ಹೋಗಿವೆ. ಒಂದು ಕೋಟಿಗೂ ಹೆಚ್ಚು ಹಾನಿಯನ್ನು ಗ್ರಾಮಸ್ಥರು ಅಂದಾಜಿಸಿದ್ದಾರೆ. ವಿಷಯ ತಿಳಿದ ತಕ್ಷಣ ಜೆಸ್ಕಾಂ ಇಲಾಖೆಯವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>