ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡಗೇರಾ: ವಿದ್ಯುತ್ ಸ್ಪರ್ಶದಿಂದ ಇಬ್ಬರು ರೈತರು, ಎತ್ತು ಸಾವು

Last Updated 28 ಸೆಪ್ಟೆಂಬರ್ 2020, 14:23 IST
ಅಕ್ಷರ ಗಾತ್ರ

ವಡಗೇರಾ: ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದ ಹೊಲಕ್ಕೆ ಹಾಕಿದ ತಂತಿ ಬೇಲಿಗೆ ವಿದ್ಯುತ್ ಸ್ಪರ್ಶಗೊಂಡು ಇಬ್ಬರು ರೈತರು, ಒಂದು ಎತ್ತು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಬಸವರಾಜ ಕಿಲ್ಲನಕೇರಾ (35), ಮೌಲಾನ ಮೋಬಿನ್ (28) ಮೃತಪಟ್ಟವರು.

ಘಟನೆ ವಿವರ:
ರೈತ ಬಸವರಾಜ ಕಿಲ್ಲನಕೇರಾ ಎತ್ತು ಮೇಯಿಸಿಕೊಂಡು ಮರಳಿ ಮನೆಗೆ ಬರುವಾಗ ಮಾರ್ಗ ಮಧ್ಯದಲ್ಲಿರುವ ಹೊಲವೊಂದಕ್ಕೆ ಅಳವಡಿಸಿದ ತಂತಿ ಬೇಲಿಗೆ ಕೊಳವೆಬಾವಿಗೆ ವಿದ್ಯುತ್ ಪೂರೈಸುವ ವೈಯರ್‌ನಿಂದ ಬೇಲಿಗೆ ವಿದ್ಯುತ್ ಸ್ಪರ್ಶವಾಗಿದೆ. ಈ ವೇಳೆ ಎತ್ತಿನ ಕಾಲು ಬೇಲಿಗೆ ಸಿಕ್ಕಿಕೊಂಡಿದೆ. ಅದನ್ನು ಬಿಡಿಸಲು ಬಸವರಾಜ ಹೋದಾಗ ವಿದ್ಯುತ್‌ ಸ್ಪರ್ಶಿಸಿದೆ. ಮತ್ತೊಬ್ಬ ರೈತ ಮೌಲಾನ ಮೋಬಿನ್ ಎನ್ನುವವರು ಹೊಲಕ್ಕೆ ಕ್ರಿಮಿನಾಶಕ ಸಿಂಪಡಿಸಿ ಮನೆಗೆ ಮರಳುವಾಗ ಎತ್ತು ಮತ್ತು ಬಸವರಾಜ ಒದ್ದಾಡುತ್ತಿರುವುದನ್ನು ಕಂಡು ಅವರನ್ನು ಬಿಡಿಸಲು ಹೋಗಿ ಅವರು ಸಹ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಡಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT