<p><strong>ಯಾದಗಿರಿ</strong>: ನಗರದ ಮುಖ್ಯ ರಸ್ತೆಗಳ ವಿಭಜಕಗಳ ನಡುವೆ ಅಳವಡಿಸಿರುವ ಎಲ್ಇಡಿ ಲೈಟ್ ಹಾಗೂ ಸ್ವೀಪ್ ಲೈಟ್ಗಳ ಕಾಮಗಾರಿಯಲ್ಲಿ ಮಾರ್ಗಸೂಚಿಯನ್ನು ಪಾಲಿಸದ ಆರೋಪದಡಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್ಐಡಿಎಲ್) ಇಬ್ಬರು ಎಂಜಿನಿಯರ್ಗಳನ್ನು ಅಮಾನತು ಮಾಡಲಾಗಿದೆ.</p>.<p>ಕೆಆರ್ಐಡಿಎಲ್ನ ಕಾರ್ಯಪಾಲಕ ಎಂಜಿನಿಯರ್ ಆರ್.ಧನಂಜಯ್ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಜ್ ಅವರ ವಿರುದ್ಧ ಇಲಾಖೆಯ ವಿಚಾರಣೆಯನ್ನು ಕಾಯ್ದಿರಿಸಿ, ಅಮಾನತು ಮಾಡಲಾಗಿದೆ ಎಂದು ಕೆಆರ್ಐಡಿಎಲ್ನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ರಸ್ತೆ ವಿಭಜಕ ನಡುವಿನ ಎಲ್ಇಡಿ ಲೈಟ್ ಹಾಗೂ ಸ್ವೀಪ್ ಲೈಟ್ಗಳ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕೃಷ್ಣಾ ಅಚ್ಚುಕಟ್ಟು ಭೂಮಿ ಉಳಿಸಿ ಹೋರಾಟ ಸಮಿತಿ ಕಾರ್ಯದರ್ಶಿ ಅಶೋಕ್ ಮಲ್ಲಾಬಾದಿ ಅವರು ಸಹ ಲೋಕಾಯುಕ್ತಕ್ಕೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ನಗರದ ಮುಖ್ಯ ರಸ್ತೆಗಳ ವಿಭಜಕಗಳ ನಡುವೆ ಅಳವಡಿಸಿರುವ ಎಲ್ಇಡಿ ಲೈಟ್ ಹಾಗೂ ಸ್ವೀಪ್ ಲೈಟ್ಗಳ ಕಾಮಗಾರಿಯಲ್ಲಿ ಮಾರ್ಗಸೂಚಿಯನ್ನು ಪಾಲಿಸದ ಆರೋಪದಡಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್ಐಡಿಎಲ್) ಇಬ್ಬರು ಎಂಜಿನಿಯರ್ಗಳನ್ನು ಅಮಾನತು ಮಾಡಲಾಗಿದೆ.</p>.<p>ಕೆಆರ್ಐಡಿಎಲ್ನ ಕಾರ್ಯಪಾಲಕ ಎಂಜಿನಿಯರ್ ಆರ್.ಧನಂಜಯ್ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಜ್ ಅವರ ವಿರುದ್ಧ ಇಲಾಖೆಯ ವಿಚಾರಣೆಯನ್ನು ಕಾಯ್ದಿರಿಸಿ, ಅಮಾನತು ಮಾಡಲಾಗಿದೆ ಎಂದು ಕೆಆರ್ಐಡಿಎಲ್ನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ರಸ್ತೆ ವಿಭಜಕ ನಡುವಿನ ಎಲ್ಇಡಿ ಲೈಟ್ ಹಾಗೂ ಸ್ವೀಪ್ ಲೈಟ್ಗಳ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕೃಷ್ಣಾ ಅಚ್ಚುಕಟ್ಟು ಭೂಮಿ ಉಳಿಸಿ ಹೋರಾಟ ಸಮಿತಿ ಕಾರ್ಯದರ್ಶಿ ಅಶೋಕ್ ಮಲ್ಲಾಬಾದಿ ಅವರು ಸಹ ಲೋಕಾಯುಕ್ತಕ್ಕೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>