ಕೋವಿಡ್-19 ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ಡೌನ್ ಘೋಷಣೆ ಆಗಿರುವುದರಿಂದ ನಿಗದಿತ ಸಮಯದೊಳಗೆ ಏಪ್ರಿಲ್ ಮತ್ತು ಮೇ 2 ತಿಂಗಳುಗಳ ಆಹಾರಧಾನ್ಯ ಪೂರ್ಣ ಪ್ರಮಾಣದಲ್ಲಿ ವಿತರಣೆ ಮಾಡಬೇಕಾಗಿರುತ್ತದೆ. ಆದರೆ, ನಿಗದಿತ ಸಮಯದೊಳಗೆ ಪಡಿತರ ಚೀಟಿದಾರರಿಗೆ ಪಡಿತರ ಆಹಾರ ಧಾನ್ಯ ವಿತರಣೆ ಆಗದೆ ಇರುವುದರಿಂದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿರುತ್ತಾರೆ.