<p><strong>ಹುಣಸಗಿ: ಪ</strong>ಟ್ಟಣದಲ್ಲಿ ತಾಲ್ಲೂಕು ಮಟ್ಟದ ಕೃಷಿಕ ಸಮಾಜದ ಕಾರ್ಯಕಾರಣಿ ಸಭೆ ನಡೆಯಿತು</p>.<p>ಈ ವೇಳೆ ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ನಾಗಣ್ಣ ಸಾಹುಕಾರ ದಂಡಿನ್ ಮಾತನಾಡಿ, ‘ರೈತರು ಹಾಗು ಸಾರ್ವಜನರಿಗೆ ಸರ್ವ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಹಾಗೂ ಯೋಜನೆಗಳ ಬಗ್ಗೆ ವಿವರಿಸಿದಾಗ ಮಾತ್ರ ಪ್ರಯೋಜನವಾಗಲಿದೆ’ ಎಂದು ತಿಳಿಸಿದರು.</p>.<p>ಕೃಷಿ ಇಲಾಖೆಯು ರೈತರಿಗೆ ಉತ್ತಮ ಮಾರ್ಗದರ್ಶನದೊಂದಿಗೆ ಕಾರ್ಯನಿರ್ವಹಿಸಲಿ. ಸರ್ಕಾರದ ಯೋಜನೆಗಳ ಕುರಿತು ರೈತರಿಗೆ ಸಮರ್ಪಕ ಮಾಹಿತಿ ನೀಡಲಿ ಎಂದು ಹೇಳಿದರು.</p>.<p>ಸಹಾಯಕ ಕೃಷಿ ಅಧಿಕಾರಿ ಸಿದ್ದಾರ್ಥ ಪಾಟೀಲ್ ಮಾತನಾಡಿ, ರೈತರಿಗೆ ಹಲವಾರು ಯೋಜನೆಗಳಡಿ ಕೃಷಿ ಯಾಂತ್ರಿಕರಣ, ತುಂತುರು ನೀರಾವರಿ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸುವ ಕುರಿತು ಮಾಹಿತಿ ನೀಡಿದರು.</p>.<p>ಪಶುವೈದ್ಯಾಧಿಕಾರಿ ಡಾ.ಮೆಹಬೂಬಸಾಬ ಖಾಜಿ ಮಾತನಾಡಿ, ರೈತಾಪಿ ಜನರ ಜಾನುವಾರುಗಳಿಗೆ ಮೇವಿನ ಬೀಜ ಹಾಗೂ ಅಗತ್ಯ ಲಸಿಕೆಗಳು ಮತ್ತು ಹೈನುಗಾರಿಕೆ ಸೇರಿದಂತೆ ಕುರಿ-ಕೋಳಿ ಸಾಕಾಣಿಕೆಗೆ ಇಲಾಖೆಯಿಂದ ನೆರವು ಪ್ರೋತ್ಸಾಹ ಕೊಡಲಾಗುತ್ತಿದ್ದು, ಸದುಪಯೋಗಿಸಿಕೊಳ್ಳುವ ಕುರಿತು ಮಾಹಿತಿ ನೀಡಿದರು.</p>.<p>ಈ ಸಂದರ್ಭಸಲ್ಲಿ ಕೃಷಿ ಸಹಾಯಕ ನಿರ್ದೇಶಕ ರಾಮನಗೌಡ ಮಾಲಿಪಾಟೀಲ್, ರೇಷ್ಮೆ ಇಲಾಖೆ ಅಧಿಕಾರಿ ಸಂಗಮೇಶ, ಸಿದ್ದಣ್ಣ, ಚಂದ್ರಶೇಖರ ದೇಸಾಯಿ, ನೀಲಕಂಠ, ಮಲ್ಲಣ್ಣ ಸೇರಿದಂತೆ ಕೃಷಿಕ ಸಮಾಜದ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ: ಪ</strong>ಟ್ಟಣದಲ್ಲಿ ತಾಲ್ಲೂಕು ಮಟ್ಟದ ಕೃಷಿಕ ಸಮಾಜದ ಕಾರ್ಯಕಾರಣಿ ಸಭೆ ನಡೆಯಿತು</p>.<p>ಈ ವೇಳೆ ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ನಾಗಣ್ಣ ಸಾಹುಕಾರ ದಂಡಿನ್ ಮಾತನಾಡಿ, ‘ರೈತರು ಹಾಗು ಸಾರ್ವಜನರಿಗೆ ಸರ್ವ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಹಾಗೂ ಯೋಜನೆಗಳ ಬಗ್ಗೆ ವಿವರಿಸಿದಾಗ ಮಾತ್ರ ಪ್ರಯೋಜನವಾಗಲಿದೆ’ ಎಂದು ತಿಳಿಸಿದರು.</p>.<p>ಕೃಷಿ ಇಲಾಖೆಯು ರೈತರಿಗೆ ಉತ್ತಮ ಮಾರ್ಗದರ್ಶನದೊಂದಿಗೆ ಕಾರ್ಯನಿರ್ವಹಿಸಲಿ. ಸರ್ಕಾರದ ಯೋಜನೆಗಳ ಕುರಿತು ರೈತರಿಗೆ ಸಮರ್ಪಕ ಮಾಹಿತಿ ನೀಡಲಿ ಎಂದು ಹೇಳಿದರು.</p>.<p>ಸಹಾಯಕ ಕೃಷಿ ಅಧಿಕಾರಿ ಸಿದ್ದಾರ್ಥ ಪಾಟೀಲ್ ಮಾತನಾಡಿ, ರೈತರಿಗೆ ಹಲವಾರು ಯೋಜನೆಗಳಡಿ ಕೃಷಿ ಯಾಂತ್ರಿಕರಣ, ತುಂತುರು ನೀರಾವರಿ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸುವ ಕುರಿತು ಮಾಹಿತಿ ನೀಡಿದರು.</p>.<p>ಪಶುವೈದ್ಯಾಧಿಕಾರಿ ಡಾ.ಮೆಹಬೂಬಸಾಬ ಖಾಜಿ ಮಾತನಾಡಿ, ರೈತಾಪಿ ಜನರ ಜಾನುವಾರುಗಳಿಗೆ ಮೇವಿನ ಬೀಜ ಹಾಗೂ ಅಗತ್ಯ ಲಸಿಕೆಗಳು ಮತ್ತು ಹೈನುಗಾರಿಕೆ ಸೇರಿದಂತೆ ಕುರಿ-ಕೋಳಿ ಸಾಕಾಣಿಕೆಗೆ ಇಲಾಖೆಯಿಂದ ನೆರವು ಪ್ರೋತ್ಸಾಹ ಕೊಡಲಾಗುತ್ತಿದ್ದು, ಸದುಪಯೋಗಿಸಿಕೊಳ್ಳುವ ಕುರಿತು ಮಾಹಿತಿ ನೀಡಿದರು.</p>.<p>ಈ ಸಂದರ್ಭಸಲ್ಲಿ ಕೃಷಿ ಸಹಾಯಕ ನಿರ್ದೇಶಕ ರಾಮನಗೌಡ ಮಾಲಿಪಾಟೀಲ್, ರೇಷ್ಮೆ ಇಲಾಖೆ ಅಧಿಕಾರಿ ಸಂಗಮೇಶ, ಸಿದ್ದಣ್ಣ, ಚಂದ್ರಶೇಖರ ದೇಸಾಯಿ, ನೀಲಕಂಠ, ಮಲ್ಲಣ್ಣ ಸೇರಿದಂತೆ ಕೃಷಿಕ ಸಮಾಜದ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>