ಜಯ ಘೋಷದೊಂದಿಗೆ ಭಕ್ತರು ಜೋಡು ಪಲ್ಲಕ್ಕಿ ಹೊತ್ತು ಭಕ್ತಿ ಸಮರ್ಪಿಸಿದರು. ಮಹಿಳೆಯರು ಮಕ್ಕಳು ಹೂ, ಉತ್ತತ್ತಿ, ಬಾಳೆಹಣ್ಣು, ಮಂಡಾಳು ಎಸೆದರು. ಈ ಜಾತ್ರೆಯಲ್ಲಿ ತಾಲ್ಲೂಕು ಹಾಗೂ ಯಾದಗಿರಿ ಜಿಲ್ಲೆಯ ಭಕ್ತರು ಸೇರಿದಂತೆ ನೆರೆಯ ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಇತರ ಜಿಲ್ಲೆಗಳ ಭಕ್ತರು ಪಾಲ್ಗೊಂಡಿದ್ದರು.
ಕೊಡೇಕಲ್ಲ ಪೊಲೀಸ್ ಠಾಣೆಯ ಪಿಎಸ್ಐಗಳಾದ ಶ್ರೀಶೈಲ ಅಂಬಾಟೆ, ದಿವ್ಯ ಅವರ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು.