ಬಳಿಚಕ್ರ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯಲ್ಲಿ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಬಾರಿ ಮುಂಗಾರು ಮಳೆ ವಾಡಿಕೆಯಷ್ಟು ಸುರಿಯ ಲಿದೆ. ನಾಲ್ಕು ದಿನ ಮೊದಲೇ ಕಾಲಿಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಒಂದು ವಾರದೊಳಗೆ ಹೆಸರು, ತೊಗರಿ ಮತ್ತು ಭತ್ತದ ಬೀಜ ಶೇಖರಿಸಲಾಗುವುದು. ಬಿತ್ತನೆ ಬೀಜ ಪಡೆಯಲು ಇಚ್ಛಿಸುವ ರೈತರು ಕಡ್ಡಾಯವಾಗಿ ಕೆ–ಕಿಸಾನ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.