ಸಂಗಪ್ಪ ಬಮ್ಮಲಿಂಗಪ್ಪ ಬಾವೂರ (65) ಎಂಬ ರೈತ ಹೊಲದಲ್ಲಿ ಮೇವು ಕತ್ತರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ರಾಜನಕೋಳೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಟ್ಟಿ ಚಿನ್ನದಗಣಿ ಆಸ್ಪತ್ರೆಗೆ ಕಳಿಸಿಕೊಡಲಾಗಿತ್ತು. ಆಸ್ಪತ್ರೆಯ ಬಳಿ ಮೃತಪಟ್ಟಿದ್ದು, ಈ ಕುರಿತು ಮೃತನ ಪುತ್ರ ಬಮ್ಮಲಿಂಗಪ್ಪ ನೀಡಿದ ದೂರಿನ ಮೇರೆಗೆ ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.