<p><strong>ಸೈದಾಪುರ: </strong>ಕೊರೊನಾ ಸಂಕಷ್ಟದಿಂದಾಗಿ ಕಂಗೆಟ್ಟಿರುವ ರೈತರ ನಡುವೆ ಖರಬೂಜ ಹಣ್ಣುಗಳನ್ನು ಬೆಳೆದ ರೈತರೊಬ್ಬರು ಲಾಕ್ಡೌನ್ ವಿನಾಯ್ತಿಯ ಅನುಕೂಲ ಪಡೆದು ಹಣ್ಣು ಮಾರಾಟ ಮಾಡಿ ಉತ್ತಮ ಆದಾಯ ಗಳಿಸಿದ್ದಾರೆ.</p>.<p>ಸಮೀಪದ ಲಿಂಗೇರಿ ಗ್ರಾಮದ ಸಾಂಬಶಿವ ರೆಡ್ಡಿ ವೆಂಕಟಕೃಷ್ಣಯ್ಯ ಅವರು ತಮ್ಮ 3 ಎಕರೆ ಒಣ ಭೂಮಿಯಲ್ಲಿ ಒಂದು ಕೊಳವೆ ಬಾವಿ ಕೊರೆಸಿಕೊಂಡು, ತೋಟಗಾರಿಕೆ ಇಲಾಖೆಯಿಂದ ಹನಿ ನಿರಾವರಿ, ಬೆಡ್, ಪ್ಲಾಸ್ಟಿಕ್ ಹೊದಿಕೆಯ ಸಹಾಯ ಪಡೆದು ಒಂದೂವರೆ ಕೆ.ಜಿ ಖರಬೂಜ ಬೀಜಗಳನ್ನು ತಂದು ಬಿತ್ತಿದ್ದರು.</p>.<p>ಒಟ್ಟು 3 ಎಕರೆ ಜಮೀನಿನಲ್ಲಿ ಖರಬೂಜ ಬೆಳೆಯಲು ಸುಮಾರು ₹2 ರಿಂದ 3 ಲಕ್ಷ ಖರ್ಚು ಮಾಡಿದ್ದಾರೆ. ಇದರಲ್ಲಿ ಈಗಾಗಲೇ17 ಟನ್ ಕರಬೂಜ ಹಣ್ಣುಗಳನ್ನು ಕೆ.ಜಿ.ಗೆ ₹20ರಂತೆ ಮಾರಾಟ ಮಾಡಿದ್ದಾರೆ. ಆ ಮೂಲಕ ₹3.40 ಲಕ್ಷ ಗಳಿಸಿದ್ದಾರೆ. ಇನ್ನೊಂದು ವಾರದಲ್ಲಿ 10 ಟನ್ ಹಣ್ಣು ಮಾರಾಟ ಮಾಡಲಾಗುತ್ತದೆ. ಕನಿಷ್ಠ 1 ಲಕ್ಷ ಆದಾಯದ ನಿರೀಕ್ಷೆ ಹೊಂದಿದ್ದಾರೆ. ಲಾಕ್ಡೌನ್ ಮಧ್ಯೆಯೂ ಸರ್ಕಾರ ಹಣ್ಣು– ತರಕಾರಿಗಳ ಮಾರಾಟಕ್ಕೆ ರಿಯಾಯಿತಿ ನೀಡಿರುವುದರಿಂದ ಹಣ್ಣುಗಳನ್ನು ಪ್ರತಿ ನಿತ್ಯ ಕಟಾವು ಮಾಡಿ ಸಮೀಪದ ಯಾದಗಿರಿ, ಶಹಾಪುರ, ರಾಯಚೂರು, ನಾರಾಯಣಪೇಠ ಮಾರುಕಟ್ಟೆಗಳಿಗೆ ಬಾಡಿಗೆ ವಾಹನದ ಮೂಲಕ ತಲುಪಿಸುತ್ತಾರೆ. ಆ ಮೂಲಕವೇ ಉತ್ತಮ ಆದಾಯ ಗಳಿಸುತ್ತಿದ್ದಾರೆ. ‘ಸಮಸ್ಯೆಗಳನ್ನು ಪರಿಹರಿಸಲು ಇರುವ ಮಾರ್ಗವನ್ನು ಕಂಡುಕೊಳ್ಳುವ ಛಲ ನಮ್ಮಲ್ಲಿ ಇರಬೇಕು’ ಎಂದು ಸಾಂಬಶಿವ ರೆಡ್ಡಿ ವೆಂಕಟಕೃಷ್ಣಯ್ಯ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ: </strong>ಕೊರೊನಾ ಸಂಕಷ್ಟದಿಂದಾಗಿ ಕಂಗೆಟ್ಟಿರುವ ರೈತರ ನಡುವೆ ಖರಬೂಜ ಹಣ್ಣುಗಳನ್ನು ಬೆಳೆದ ರೈತರೊಬ್ಬರು ಲಾಕ್ಡೌನ್ ವಿನಾಯ್ತಿಯ ಅನುಕೂಲ ಪಡೆದು ಹಣ್ಣು ಮಾರಾಟ ಮಾಡಿ ಉತ್ತಮ ಆದಾಯ ಗಳಿಸಿದ್ದಾರೆ.</p>.<p>ಸಮೀಪದ ಲಿಂಗೇರಿ ಗ್ರಾಮದ ಸಾಂಬಶಿವ ರೆಡ್ಡಿ ವೆಂಕಟಕೃಷ್ಣಯ್ಯ ಅವರು ತಮ್ಮ 3 ಎಕರೆ ಒಣ ಭೂಮಿಯಲ್ಲಿ ಒಂದು ಕೊಳವೆ ಬಾವಿ ಕೊರೆಸಿಕೊಂಡು, ತೋಟಗಾರಿಕೆ ಇಲಾಖೆಯಿಂದ ಹನಿ ನಿರಾವರಿ, ಬೆಡ್, ಪ್ಲಾಸ್ಟಿಕ್ ಹೊದಿಕೆಯ ಸಹಾಯ ಪಡೆದು ಒಂದೂವರೆ ಕೆ.ಜಿ ಖರಬೂಜ ಬೀಜಗಳನ್ನು ತಂದು ಬಿತ್ತಿದ್ದರು.</p>.<p>ಒಟ್ಟು 3 ಎಕರೆ ಜಮೀನಿನಲ್ಲಿ ಖರಬೂಜ ಬೆಳೆಯಲು ಸುಮಾರು ₹2 ರಿಂದ 3 ಲಕ್ಷ ಖರ್ಚು ಮಾಡಿದ್ದಾರೆ. ಇದರಲ್ಲಿ ಈಗಾಗಲೇ17 ಟನ್ ಕರಬೂಜ ಹಣ್ಣುಗಳನ್ನು ಕೆ.ಜಿ.ಗೆ ₹20ರಂತೆ ಮಾರಾಟ ಮಾಡಿದ್ದಾರೆ. ಆ ಮೂಲಕ ₹3.40 ಲಕ್ಷ ಗಳಿಸಿದ್ದಾರೆ. ಇನ್ನೊಂದು ವಾರದಲ್ಲಿ 10 ಟನ್ ಹಣ್ಣು ಮಾರಾಟ ಮಾಡಲಾಗುತ್ತದೆ. ಕನಿಷ್ಠ 1 ಲಕ್ಷ ಆದಾಯದ ನಿರೀಕ್ಷೆ ಹೊಂದಿದ್ದಾರೆ. ಲಾಕ್ಡೌನ್ ಮಧ್ಯೆಯೂ ಸರ್ಕಾರ ಹಣ್ಣು– ತರಕಾರಿಗಳ ಮಾರಾಟಕ್ಕೆ ರಿಯಾಯಿತಿ ನೀಡಿರುವುದರಿಂದ ಹಣ್ಣುಗಳನ್ನು ಪ್ರತಿ ನಿತ್ಯ ಕಟಾವು ಮಾಡಿ ಸಮೀಪದ ಯಾದಗಿರಿ, ಶಹಾಪುರ, ರಾಯಚೂರು, ನಾರಾಯಣಪೇಠ ಮಾರುಕಟ್ಟೆಗಳಿಗೆ ಬಾಡಿಗೆ ವಾಹನದ ಮೂಲಕ ತಲುಪಿಸುತ್ತಾರೆ. ಆ ಮೂಲಕವೇ ಉತ್ತಮ ಆದಾಯ ಗಳಿಸುತ್ತಿದ್ದಾರೆ. ‘ಸಮಸ್ಯೆಗಳನ್ನು ಪರಿಹರಿಸಲು ಇರುವ ಮಾರ್ಗವನ್ನು ಕಂಡುಕೊಳ್ಳುವ ಛಲ ನಮ್ಮಲ್ಲಿ ಇರಬೇಕು’ ಎಂದು ಸಾಂಬಶಿವ ರೆಡ್ಡಿ ವೆಂಕಟಕೃಷ್ಣಯ್ಯ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>